Advertisement
ಸುದ್ದಿಗಳು

ಶಾಲೆಗಳಲ್ಲಿ “ವಾಟರ್ ಬೆಲ್” ಕಡೆಗೆ ಆಸಕ್ತರಾದ ಶಿಕ್ಷಣ ಸಚಿವರು

Share

ಬೆಂಗಳೂರು: ಶಾಲಾ ಮಕ್ಕಳ ಆರೋಗ್ಯದ ಕಡೆಗೆ ರಾಜ್ಯದ ಶಿಕ್ಷಣ ಸಚಿವರು ಕಾಳಜಿ ವಹಿಸಿದ್ದಾರೆ. ಈಗಾಗಲೇ ಕೇರಳ ಹಾಗೂ ರಾಜ್ಯದ ಕೆಲವು ಶಾಲೆಗಳಲ್ಲಿ ಅನುಷ್ಟಾನ ಮಾಡಿರುವ “ವಾಟರ್ ಬೆಲ್” ಎಲ್ಲಾ ಶಾಲೆಗಳಲ್ಲೂ ಜಾರಿ ಮಾಡುವತ್ತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತರಾಗಿದ್ದು , ಶಿಕ್ಷಣ  ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

Advertisement
Advertisement

 

Advertisement

ಕೇರಳದಲ್ಲಿ  ಈ ಯೋಜನೆ ಈಗಾಗಲೇ ಜಾರಿಯಾಗಿದೆ. ಶಾಲಾ ಮಕ್ಕಳು ಕಡ್ಡಾಯವಾಗಿ ಮೂರು ಬಾರಿ ನೀರು  ಕುಡಿಯುವ ಯೋಜನೆ ಇದು. ಶಾಲೆಯಲ್ಲಿ ನೀರು ಕುಡಿಯಲೆಂದೇ ಬೆಲ್ ಕೊಡಲಾಗುತ್ತದೆ. ಈ ಸಂದರ್ಭ ಮಕ್ಕಳು ನೀರು ಕುಡಿಯಬೇಕು. ಇದು ಯೋಜನೆಯ ಸಂಕ್ಷಿಪ್ತ ರೂಪ. ಪ್ಲಾಸ್ಟಿಕ್ ರಹಿತವಾದ ಬಾಟಲಿಯಲ್ಲಿಯೇ ಮಕ್ಕಳು ಶಾಲೆಗೆ ನೀರು ತರಬೇಕು. ಕೇರಳದಲ್ಲಿ ಈ ಯೋಜನೆ ಯಶಸ್ವಿಯಾಗಿದೆ.

Advertisement

ಮೊದಲು ಕೇರಳದ ತಿರುವನಂತಪುರಂನ ಗ್ರೀನ್ ಡೋಮ್ ಪಬ್ಲಿಕ್ ಶಾಲೆ ಈ ವರ್ಷದ ಆರಂಭದಲ್ಲಿ ‘ವಾಟರ್ ಬೆಲ್’ ಯೋಜನೆಯಂತೆ ನೀರು ಕುಡಿಯಲು ನಿರ್ದಿಷ್ಟ ಅವಧಿಯಲ್ಲಿ ವಿಶೇಷ ವಿರಾಮದ ಸಮಯ ನೀಡುವುದು ಈ ಯೋಜನೆ ಉದ್ದೇಶ.

ರಾಜ್ಯದ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಇಂದ್ರಪ್ರಸ್ಥ ಶಾಲೆಯಲ್ಲಿ,  ಸುಳ್ಯದ ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ  ಈಗಾಗಲೇ ಈ ಯೋಜನೆ ಜಾರಿಯಲ್ಲಿದೆ. ಸುಳ್ಯ ತಾಲೂಕಿನ ಎಲಿಮಲೆ ಜ್ಞಾನದೀಪ ಶಾಲೆಯಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ಸಲಹೆ ನೀಡಲಾಗಿದೆ. ಹೀಗಾಗಿ ಇಲ್ಲೂ ಮಕ್ಕಳು ಸಾಕಷ್ಟು ನೀರು ಕುಡಿಯುತ್ತಾರೆ.

Advertisement

ಇದೀಗ ವಾಟರ್ ಬೆಲ್ ಯೋಜನೆಯ ಬಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಆಸಕ್ತಿ ವಹಿಸಿ  ರಾಜ್ಯದಲ್ಲೂ ಈ ಯೋಜನೆ ಜಾರಿಯಾಗಬೇಕು ಎಂದು ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದು ರಾಜ್ಯದ ಶಾಲೆಗಳಲ್ಲಿಯೂ ಇದನ್ನು ಅನುಷ್ಠಾನಗೊಳಿಸುವ ಕುರಿತು ಯೋಚಿಸಿ ಕಾರ್ಯಕ್ರಮ ರೂಪಿಸಬೇಕೆಂದು ನಮ್ಮ ಶಿಕ್ಷಣ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಅವರು  ಟ್ವಿಟ್ಟರ್ ನಲ್ಲಿ  ಬರೆದಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

16 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

17 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago