MIRROR FOCUS

ಶಾಲೆಯಲ್ಲಿ ನವಾನ್ನ ಭೋಜನ…! : ಭತ್ತದ ಬೇಸಾಯದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಸುಳ್ಯ ತಾಲೂಕಿನ ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ “ನವಾನ್ನ” ಭೋಜನದ ವಿಶೇಷ ಆಚರಣೆ ಹಾಗೂ ಭತ್ತದ ಬೇಸಾಯದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

Advertisement
Advertisement

ಶಾಲೆಯ ಅಂಗಳದಲ್ಲಿ ಭತ್ತದ ಬೇಸಾಯ ಮಾಡಿ ಮಕ್ಕಳಿಗೆ ಅನ್ನದ ಹಿಂದಿನ ಶ್ರಮವನ್ನು ತಿಳಿಸಿ  ಹಿರಿಯರು ಆಚರಿಸುತ್ತಿದ್ದ “ನವಾನ್ನ”ದ ಸವಿ ಊಟವನ್ನು ಮಕ್ಕಳಿಗೆ ಉಣಬಡಿಸಿ ಹಿಂದಿನ ಸಂಸ್ಕೃತಿಯನ್ನು  ಅನಾವರಣಗೊಳಿಸಲಾಯಿತು. ಜೊತೆಗೆ ಮಕ್ಕಳಿಗೆ ಅನ್ನದ ಹಿಂದಿನ ಶ್ರಮವನ್ನು  ಪರಿಚಯಿಸಲಾಯಿತು.

 

“ನವಾನ್ನ ”  ಆಚರಣೆ ಹಾಗು ಭತ್ತ ಬೇಸಾಯದ ಮಹತ್ವ ಬಗ್ಗೆ ಡಾ.ಸುಂದರ ಕೇನಾಜೆ  ಮಾತನಾಡಿ, ಮಕ್ಕಳು ಸ್ವಾಲಂಬಿಗಳಾಗೋದನ್ನು ಕಲಿಸಬೇಕಾಗಿದೆ. ಬರಿಯ ತಿನ್ನುವ ಅಕ್ಕಿಮಾತ್ರ ಅಲ್ಲ, ಅದು ಒಂದು ಬದುಕನ್ನು ಕಟ್ಟಿದಂತಹ, ಒಂದು ಸಂಸ್ಕೃತಿಯನ್ನು ಉಳಿಸಿದಂತಹ ಇಡೀ ತುಳುವರ ಪರಿಕಲ್ಪನೆಗಳಲ್ಲಿ ಅವರನ್ನು ಬೆಳೆಸಿದ ವ್ಯವಸ್ಥೆ. ಬೇಸಾಯದ ಹಿನ್ನಲೆಯಲ್ಲಿ ತುಳು ಸಂಸ್ಕೃತಿ ನಿಂತಿದೆ.  ಸಂಸಾರದವರೆಲ್ಲ ಕೂಡಿ ಮಾಡುವ ನವಾನ್ನದ ಆಚರಣೆ ಬಂಧುತ್ವದ ಕಲ್ಪನೆ ಎಲ್ಲರನ್ನೂ ಒಂದುಗೂಡಿಸುವಂತಹದ್ದು. ಬಂಧುತ್ವ ಎಳೆಗಳು ನಮ್ಮಲ್ಲಿ ಬಹಳ ಮುಖ್ಯವಾಗಿ ಮಾತೃಪ್ರಧಾನವಾದ ವ್ಯವಸ್ಥೆ. ತಾಯಿಯನ್ನು ಮೂಲವಾಗಿಟ್ಟ ವ್ಯವಸ್ಥೆ ತುಳುವರದ್ದು. ಬಂಧುತ್ವದ ಸಂಕೇತವಾದ ಅಕ್ಕಿ ಬಹಳ ಮಹತ್ವದ್ದು. ಅದು ಸಮೃದ್ಧಿಯ ಸಂಕೇತ. ಪ್ರಕೃತಿಯ ಅನುಸಂಧಾನವನ್ನು ಕೂಡಾ ನಾವು ಬೇಸಾಯದಲ್ಲಿ ಕಾಣಬಹುದು ಎಂದರು.

Advertisement

ತಾಲೂಕು ಪಂಚಾಯತ್  ಉಪಾಧ್ಯಕ್ಷರಾದ ಶುಭದಾ ಎಸ್ ರೈ ಶುಭ ಹಾರೈಸಿದರು.

ಗ್ರಾಮಪಂಚಾಯತ್ ಬಾಳಿಲದ ಸದಸ್ಯರಾದ ರವೀಂದ್ರ ರೈ ಟಪಾಲುಕಟ್ಟೆ, ಎಸ್ ಡಿ ಯಂ ಸಿ ಯ ಉಪಾಧ್ಯಕ್ಷರಾದ ಭುವನೇಶ್ವರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಕ್ಕಳು ರೈತ ಗೀತೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ಬಯ್ಯ ವೈ ಬಿ ಸ್ವಾಗತಿಸಿ, ಎಸ್ ಡಿ ಯಂ ಸಿ ಅಧ್ಯಕ್ಷರಾದ ಜಾಹ್ನವಿ ಕಾಂಚೋಡು ವಂದಿಸಿದರು. ಶಿಕ್ಷಕರಾದ ಶಿವಪ್ರಸಾದ್ ಜಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

2 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

10 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

10 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

10 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

11 hours ago