Advertisement
MIRROR FOCUS

ಶಾಲೆಯಲ್ಲಿ ನವಾನ್ನ ಭೋಜನ…! : ಭತ್ತದ ಬೇಸಾಯದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ

Share

ಬೆಳ್ಳಾರೆ : ಸುಳ್ಯ ತಾಲೂಕಿನ ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ “ನವಾನ್ನ” ಭೋಜನದ ವಿಶೇಷ ಆಚರಣೆ ಹಾಗೂ ಭತ್ತದ ಬೇಸಾಯದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

Advertisement
Advertisement

ಶಾಲೆಯ ಅಂಗಳದಲ್ಲಿ ಭತ್ತದ ಬೇಸಾಯ ಮಾಡಿ ಮಕ್ಕಳಿಗೆ ಅನ್ನದ ಹಿಂದಿನ ಶ್ರಮವನ್ನು ತಿಳಿಸಿ  ಹಿರಿಯರು ಆಚರಿಸುತ್ತಿದ್ದ “ನವಾನ್ನ”ದ ಸವಿ ಊಟವನ್ನು ಮಕ್ಕಳಿಗೆ ಉಣಬಡಿಸಿ ಹಿಂದಿನ ಸಂಸ್ಕೃತಿಯನ್ನು  ಅನಾವರಣಗೊಳಿಸಲಾಯಿತು. ಜೊತೆಗೆ ಮಕ್ಕಳಿಗೆ ಅನ್ನದ ಹಿಂದಿನ ಶ್ರಮವನ್ನು  ಪರಿಚಯಿಸಲಾಯಿತು.

 

“ನವಾನ್ನ ”  ಆಚರಣೆ ಹಾಗು ಭತ್ತ ಬೇಸಾಯದ ಮಹತ್ವ ಬಗ್ಗೆ ಡಾ.ಸುಂದರ ಕೇನಾಜೆ  ಮಾತನಾಡಿ, ಮಕ್ಕಳು ಸ್ವಾಲಂಬಿಗಳಾಗೋದನ್ನು ಕಲಿಸಬೇಕಾಗಿದೆ. ಬರಿಯ ತಿನ್ನುವ ಅಕ್ಕಿಮಾತ್ರ ಅಲ್ಲ, ಅದು ಒಂದು ಬದುಕನ್ನು ಕಟ್ಟಿದಂತಹ, ಒಂದು ಸಂಸ್ಕೃತಿಯನ್ನು ಉಳಿಸಿದಂತಹ ಇಡೀ ತುಳುವರ ಪರಿಕಲ್ಪನೆಗಳಲ್ಲಿ ಅವರನ್ನು ಬೆಳೆಸಿದ ವ್ಯವಸ್ಥೆ. ಬೇಸಾಯದ ಹಿನ್ನಲೆಯಲ್ಲಿ ತುಳು ಸಂಸ್ಕೃತಿ ನಿಂತಿದೆ.  ಸಂಸಾರದವರೆಲ್ಲ ಕೂಡಿ ಮಾಡುವ ನವಾನ್ನದ ಆಚರಣೆ ಬಂಧುತ್ವದ ಕಲ್ಪನೆ ಎಲ್ಲರನ್ನೂ ಒಂದುಗೂಡಿಸುವಂತಹದ್ದು. ಬಂಧುತ್ವ ಎಳೆಗಳು ನಮ್ಮಲ್ಲಿ ಬಹಳ ಮುಖ್ಯವಾಗಿ ಮಾತೃಪ್ರಧಾನವಾದ ವ್ಯವಸ್ಥೆ. ತಾಯಿಯನ್ನು ಮೂಲವಾಗಿಟ್ಟ ವ್ಯವಸ್ಥೆ ತುಳುವರದ್ದು. ಬಂಧುತ್ವದ ಸಂಕೇತವಾದ ಅಕ್ಕಿ ಬಹಳ ಮಹತ್ವದ್ದು. ಅದು ಸಮೃದ್ಧಿಯ ಸಂಕೇತ. ಪ್ರಕೃತಿಯ ಅನುಸಂಧಾನವನ್ನು ಕೂಡಾ ನಾವು ಬೇಸಾಯದಲ್ಲಿ ಕಾಣಬಹುದು ಎಂದರು.

ತಾಲೂಕು ಪಂಚಾಯತ್  ಉಪಾಧ್ಯಕ್ಷರಾದ ಶುಭದಾ ಎಸ್ ರೈ ಶುಭ ಹಾರೈಸಿದರು.

ಗ್ರಾಮಪಂಚಾಯತ್ ಬಾಳಿಲದ ಸದಸ್ಯರಾದ ರವೀಂದ್ರ ರೈ ಟಪಾಲುಕಟ್ಟೆ, ಎಸ್ ಡಿ ಯಂ ಸಿ ಯ ಉಪಾಧ್ಯಕ್ಷರಾದ ಭುವನೇಶ್ವರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಕ್ಕಳು ರೈತ ಗೀತೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ಬಯ್ಯ ವೈ ಬಿ ಸ್ವಾಗತಿಸಿ, ಎಸ್ ಡಿ ಯಂ ಸಿ ಅಧ್ಯಕ್ಷರಾದ ಜಾಹ್ನವಿ ಕಾಂಚೋಡು ವಂದಿಸಿದರು. ಶಿಕ್ಷಕರಾದ ಶಿವಪ್ರಸಾದ್ ಜಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

5 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

5 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

5 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

5 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

5 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

6 hours ago