Advertisement
MIRROR FOCUS

ಶಾಲೆಯಲ್ಲಿ ನವಾನ್ನ ಭೋಜನ…! : ಭತ್ತದ ಬೇಸಾಯದ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ

Share

ಬೆಳ್ಳಾರೆ : ಸುಳ್ಯ ತಾಲೂಕಿನ ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ “ನವಾನ್ನ” ಭೋಜನದ ವಿಶೇಷ ಆಚರಣೆ ಹಾಗೂ ಭತ್ತದ ಬೇಸಾಯದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.

ಶಾಲೆಯ ಅಂಗಳದಲ್ಲಿ ಭತ್ತದ ಬೇಸಾಯ ಮಾಡಿ ಮಕ್ಕಳಿಗೆ ಅನ್ನದ ಹಿಂದಿನ ಶ್ರಮವನ್ನು ತಿಳಿಸಿ  ಹಿರಿಯರು ಆಚರಿಸುತ್ತಿದ್ದ “ನವಾನ್ನ”ದ ಸವಿ ಊಟವನ್ನು ಮಕ್ಕಳಿಗೆ ಉಣಬಡಿಸಿ ಹಿಂದಿನ ಸಂಸ್ಕೃತಿಯನ್ನು  ಅನಾವರಣಗೊಳಿಸಲಾಯಿತು. ಜೊತೆಗೆ ಮಕ್ಕಳಿಗೆ ಅನ್ನದ ಹಿಂದಿನ ಶ್ರಮವನ್ನು  ಪರಿಚಯಿಸಲಾಯಿತು.

 

“ನವಾನ್ನ ”  ಆಚರಣೆ ಹಾಗು ಭತ್ತ ಬೇಸಾಯದ ಮಹತ್ವ ಬಗ್ಗೆ ಡಾ.ಸುಂದರ ಕೇನಾಜೆ  ಮಾತನಾಡಿ, ಮಕ್ಕಳು ಸ್ವಾಲಂಬಿಗಳಾಗೋದನ್ನು ಕಲಿಸಬೇಕಾಗಿದೆ. ಬರಿಯ ತಿನ್ನುವ ಅಕ್ಕಿಮಾತ್ರ ಅಲ್ಲ, ಅದು ಒಂದು ಬದುಕನ್ನು ಕಟ್ಟಿದಂತಹ, ಒಂದು ಸಂಸ್ಕೃತಿಯನ್ನು ಉಳಿಸಿದಂತಹ ಇಡೀ ತುಳುವರ ಪರಿಕಲ್ಪನೆಗಳಲ್ಲಿ ಅವರನ್ನು ಬೆಳೆಸಿದ ವ್ಯವಸ್ಥೆ. ಬೇಸಾಯದ ಹಿನ್ನಲೆಯಲ್ಲಿ ತುಳು ಸಂಸ್ಕೃತಿ ನಿಂತಿದೆ.  ಸಂಸಾರದವರೆಲ್ಲ ಕೂಡಿ ಮಾಡುವ ನವಾನ್ನದ ಆಚರಣೆ ಬಂಧುತ್ವದ ಕಲ್ಪನೆ ಎಲ್ಲರನ್ನೂ ಒಂದುಗೂಡಿಸುವಂತಹದ್ದು. ಬಂಧುತ್ವ ಎಳೆಗಳು ನಮ್ಮಲ್ಲಿ ಬಹಳ ಮುಖ್ಯವಾಗಿ ಮಾತೃಪ್ರಧಾನವಾದ ವ್ಯವಸ್ಥೆ. ತಾಯಿಯನ್ನು ಮೂಲವಾಗಿಟ್ಟ ವ್ಯವಸ್ಥೆ ತುಳುವರದ್ದು. ಬಂಧುತ್ವದ ಸಂಕೇತವಾದ ಅಕ್ಕಿ ಬಹಳ ಮಹತ್ವದ್ದು. ಅದು ಸಮೃದ್ಧಿಯ ಸಂಕೇತ. ಪ್ರಕೃತಿಯ ಅನುಸಂಧಾನವನ್ನು ಕೂಡಾ ನಾವು ಬೇಸಾಯದಲ್ಲಿ ಕಾಣಬಹುದು ಎಂದರು.

ತಾಲೂಕು ಪಂಚಾಯತ್  ಉಪಾಧ್ಯಕ್ಷರಾದ ಶುಭದಾ ಎಸ್ ರೈ ಶುಭ ಹಾರೈಸಿದರು.

ಗ್ರಾಮಪಂಚಾಯತ್ ಬಾಳಿಲದ ಸದಸ್ಯರಾದ ರವೀಂದ್ರ ರೈ ಟಪಾಲುಕಟ್ಟೆ, ಎಸ್ ಡಿ ಯಂ ಸಿ ಯ ಉಪಾಧ್ಯಕ್ಷರಾದ ಭುವನೇಶ್ವರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಕ್ಕಳು ರೈತ ಗೀತೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ಬಯ್ಯ ವೈ ಬಿ ಸ್ವಾಗತಿಸಿ, ಎಸ್ ಡಿ ಯಂ ಸಿ ಅಧ್ಯಕ್ಷರಾದ ಜಾಹ್ನವಿ ಕಾಂಚೋಡು ವಂದಿಸಿದರು. ಶಿಕ್ಷಕರಾದ ಶಿವಪ್ರಸಾದ್ ಜಿ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

2 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

2 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

10 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

11 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

18 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

21 hours ago