ಬೆಳ್ಳಾರೆ : ಸುಳ್ಯ ತಾಲೂಕಿನ ಬಾಳಿಲದ ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ “ನವಾನ್ನ” ಭೋಜನದ ವಿಶೇಷ ಆಚರಣೆ ಹಾಗೂ ಭತ್ತದ ಬೇಸಾಯದ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು.
ಶಾಲೆಯ ಅಂಗಳದಲ್ಲಿ ಭತ್ತದ ಬೇಸಾಯ ಮಾಡಿ ಮಕ್ಕಳಿಗೆ ಅನ್ನದ ಹಿಂದಿನ ಶ್ರಮವನ್ನು ತಿಳಿಸಿ ಹಿರಿಯರು ಆಚರಿಸುತ್ತಿದ್ದ “ನವಾನ್ನ”ದ ಸವಿ ಊಟವನ್ನು ಮಕ್ಕಳಿಗೆ ಉಣಬಡಿಸಿ ಹಿಂದಿನ ಸಂಸ್ಕೃತಿಯನ್ನು ಅನಾವರಣಗೊಳಿಸಲಾಯಿತು. ಜೊತೆಗೆ ಮಕ್ಕಳಿಗೆ ಅನ್ನದ ಹಿಂದಿನ ಶ್ರಮವನ್ನು ಪರಿಚಯಿಸಲಾಯಿತು.
“ನವಾನ್ನ ” ಆಚರಣೆ ಹಾಗು ಭತ್ತ ಬೇಸಾಯದ ಮಹತ್ವ ಬಗ್ಗೆ ಡಾ.ಸುಂದರ ಕೇನಾಜೆ ಮಾತನಾಡಿ, ಮಕ್ಕಳು ಸ್ವಾಲಂಬಿಗಳಾಗೋದನ್ನು ಕಲಿಸಬೇಕಾಗಿದೆ. ಬರಿಯ ತಿನ್ನುವ ಅಕ್ಕಿಮಾತ್ರ ಅಲ್ಲ, ಅದು ಒಂದು ಬದುಕನ್ನು ಕಟ್ಟಿದಂತಹ, ಒಂದು ಸಂಸ್ಕೃತಿಯನ್ನು ಉಳಿಸಿದಂತಹ ಇಡೀ ತುಳುವರ ಪರಿಕಲ್ಪನೆಗಳಲ್ಲಿ ಅವರನ್ನು ಬೆಳೆಸಿದ ವ್ಯವಸ್ಥೆ. ಬೇಸಾಯದ ಹಿನ್ನಲೆಯಲ್ಲಿ ತುಳು ಸಂಸ್ಕೃತಿ ನಿಂತಿದೆ. ಸಂಸಾರದವರೆಲ್ಲ ಕೂಡಿ ಮಾಡುವ ನವಾನ್ನದ ಆಚರಣೆ ಬಂಧುತ್ವದ ಕಲ್ಪನೆ ಎಲ್ಲರನ್ನೂ ಒಂದುಗೂಡಿಸುವಂತಹದ್ದು. ಬಂಧುತ್ವ ಎಳೆಗಳು ನಮ್ಮಲ್ಲಿ ಬಹಳ ಮುಖ್ಯವಾಗಿ ಮಾತೃಪ್ರಧಾನವಾದ ವ್ಯವಸ್ಥೆ. ತಾಯಿಯನ್ನು ಮೂಲವಾಗಿಟ್ಟ ವ್ಯವಸ್ಥೆ ತುಳುವರದ್ದು. ಬಂಧುತ್ವದ ಸಂಕೇತವಾದ ಅಕ್ಕಿ ಬಹಳ ಮಹತ್ವದ್ದು. ಅದು ಸಮೃದ್ಧಿಯ ಸಂಕೇತ. ಪ್ರಕೃತಿಯ ಅನುಸಂಧಾನವನ್ನು ಕೂಡಾ ನಾವು ಬೇಸಾಯದಲ್ಲಿ ಕಾಣಬಹುದು ಎಂದರು.
ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಶುಭದಾ ಎಸ್ ರೈ ಶುಭ ಹಾರೈಸಿದರು.
ಗ್ರಾಮಪಂಚಾಯತ್ ಬಾಳಿಲದ ಸದಸ್ಯರಾದ ರವೀಂದ್ರ ರೈ ಟಪಾಲುಕಟ್ಟೆ, ಎಸ್ ಡಿ ಯಂ ಸಿ ಯ ಉಪಾಧ್ಯಕ್ಷರಾದ ಭುವನೇಶ್ವರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಕ್ಕಳು ರೈತ ಗೀತೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ಬಯ್ಯ ವೈ ಬಿ ಸ್ವಾಗತಿಸಿ, ಎಸ್ ಡಿ ಯಂ ಸಿ ಅಧ್ಯಕ್ಷರಾದ ಜಾಹ್ನವಿ ಕಾಂಚೋಡು ವಂದಿಸಿದರು. ಶಿಕ್ಷಕರಾದ ಶಿವಪ್ರಸಾದ್ ಜಿ ಕಾರ್ಯಕ್ರಮ ನಿರೂಪಿಸಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…