ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದರ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ. ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿದ ಸಾಮಾನ್ಯ ಅಭಿಪ್ರಾಯವಷ್ಟೇ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಪೇಕ್ಷೆಯಂತೆ ರಾಜ್ಯದಲ್ಲಿ ಸೆಪ್ಟೆಂಬರ್ನಲ್ಲಿ ಶಾಲೆಗಳ ಪುನರಾರಂಭವಾಗಲಿದೆ ಎನ್ನುವುದು ಅಭಿಪ್ರಾಯ, ಇದು ಸರ್ಕಾರದ ನಿರ್ಣಯವಾಗಿರುವುದಿಲ್ಲ ಎಂದು ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…