ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದರ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ. ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿದ ಸಾಮಾನ್ಯ ಅಭಿಪ್ರಾಯವಷ್ಟೇ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಪೇಕ್ಷೆಯಂತೆ ರಾಜ್ಯದಲ್ಲಿ ಸೆಪ್ಟೆಂಬರ್ನಲ್ಲಿ ಶಾಲೆಗಳ ಪುನರಾರಂಭವಾಗಲಿದೆ ಎನ್ನುವುದು ಅಭಿಪ್ರಾಯ, ಇದು ಸರ್ಕಾರದ ನಿರ್ಣಯವಾಗಿರುವುದಿಲ್ಲ ಎಂದು ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…