ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದರ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ. ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿದ ಸಾಮಾನ್ಯ ಅಭಿಪ್ರಾಯವಷ್ಟೇ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಪೇಕ್ಷೆಯಂತೆ ರಾಜ್ಯದಲ್ಲಿ ಸೆಪ್ಟೆಂಬರ್ನಲ್ಲಿ ಶಾಲೆಗಳ ಪುನರಾರಂಭವಾಗಲಿದೆ ಎನ್ನುವುದು ಅಭಿಪ್ರಾಯ, ಇದು ಸರ್ಕಾರದ ನಿರ್ಣಯವಾಗಿರುವುದಿಲ್ಲ ಎಂದು ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…