Advertisement
MIRROR FOCUS

ಶಾಲೆ- ಕಾಲೇಜಿನಲ್ಲಿ ನಿಮ್ಮ ಮಕ್ಕಳೇನು ಮಾಡುತ್ತಾರೆ ಗಮನಿಸಿದ್ದೀರಾ ?

Share

ಶಾಲೆ , ಕಾಲೇಜಿಗೆ ಹೋಗುವ ನಿಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ? ಯಾವ ರೀತಿ ಅವರ ನಡವಳಿಕೆ ಇದೆ ? ಮೊಬೈಲ್ ನಲ್ಲಿ ದಿನಿವಿಡೀ ಒಬ್ಬರೇ  ಕುಳಿತು ಏನು ನೋಡುತ್ತಾರೆ , ಏನು ಮಾಡುತ್ತಾರೆ ? ಎಂಬುದನ್ನು  ನೀವು ಗಮನಿಸಿದ್ದೀರಾ ? ಇಲ್ಲವಾದರೆ ಗಮನಿಸುವುದಕ್ಕೆ ಆರಂಭಿಸುವುದು ಉತ್ತಮ. ಸಮಾಜ ಕೆಟ್ಟಿದೆ, ವ್ಯವಸ್ಥೆ ಕೆಟ್ಟಿದೆ ಎಂದು ನಂತರ ದೂರುವ ಮೊದಲು ಈಗಲೇ ಎಚ್ಚೆತ್ತುಕೊಳ್ಳುವುದು  ಹೆಚ್ಚು ಸೂಕ್ತ.

ಕಳೆದೊಂದು ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನತೆಯದ್ದೇ ಸುದ್ದಿ.  ಪುತ್ತೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಒಂದು ಕಡೆಯಾದರೆ ಮಂಗಳೂರಿನಲ್ಲಿ  ಯುವತಿಯ ಮೇಲೆ ಇರಿದ ಪ್ರಕರಣ ಇನ್ನೊಂದು. ಇದೆರಡು ಈ ವಾರದ ಘಟನೆಗಳು. ಇದಾದ ಬಳಿಕ ಅನೇಕ ಮಂದಿ ಮಾತನಾಡುತ್ತಾರೆ, ” ಇದು ಹೊರಬಂದ ಪ್ರಕರಣ, ಹೊರಬಾರದ ಪ್ರಕರಣ ಇನ್ನೆಷ್ಟು ಇರಬಹುದು “. ಇದರ ಅರ್ಥ, ಇಂದಿನ ವ್ಯವಸ್ಥೆ ಮೇಲೆ ಅನೇಕರು ನಿರಾಶೆಯನ್ನು  ಹೊಂದಿದ್ದಾರೆ. ಇದಕ್ಕೆ ಕಾಲೇಜು, ಸಮಾಜ, ವ್ಯವಸ್ಥೆ,  ಪೊಲೀಸ್ ಇಲಾಖೆ ಮಾತ್ರವೇ  ಕಾರಣವಲ್ಲ ಪೋಷಕರೂ ಕಾರಣರಾಗುತ್ತಾರೆ.

ಎರಡು ವರ್ಷದ ಹಿಂದೆ ಹೈಸ್ಕೂಲ್ ಒಂದರಲ್ಲಿ  ಶಾಲೆಯ ಕಚೇರಿ ಬೀಗ ಮುರಿದು ಒಳನುಗ್ಗಿ ಹಣವನ್ನು ಲಪಟಾಯಿಸಿದರು.  ಸಿಸಿ ಕ್ಯಾಮಾರ ವೀಕ್ಷಣೆ ಮಾಡಿದಾಗ ಆಘಾತಕಾರಿ ಅಂಶ ಬೆಳಕಿಗೆ ಬಂತು. ಅದೇ ಶಾಲೆಯ ವಿದ್ಯಾರ್ಥಿಗಳ ತಂಡ ಮಾಡಿರುವ  ಕಳ್ಳತನ ಬೆಳಕಿಗೆ ಬಂದಿತ್ತು. ಬಳಿಕ  ವಿಚಾರಣೆ ಮಾಡಿದಾಗ  ವಿದ್ಯಾರ್ಥಿಗಳು ಮೊಬೈಲ್ ಮೂಲಕ ಗಂಟೆಗಟ್ಟಲೆ ಸಿಸಿ ಕ್ಯಾಮಾರ ಹೇಗೆ ಬಂದ್ ಮಾಡಬಹುದು ಎಂದು ಗೂಗಲ್ ಸರ್ಚ್ ಮಾಡಿದರು. ನಂತರ ಹಾಗೆಯೇ ಮಾಡಿದ್ದರು. ಆದರೂ ಒಂದು ಸಿಸಿ ಕ್ಯಾಮಾರ ವಿದ್ಯಾರ್ಥಿಗಳ ಗಮನಕ್ಕೆ ಬಾರದೇ ಸಿಕ್ಕಿಬಿದ್ದಿದ್ದರು. ಮನೆಯರಲ್ಲಿ ಈ ಬಗ್ಗ ವಿಚಾರಿಸಿದಾಗ ಅವರು ಪ್ರಾಜೆಕ್ಟ್ ಅಂತ ಮೊಬೈಲ್ ನಲ್ಲಿ ನೋಡುತ್ತಿದ್ದರು. ನಾವು ಗಮನಿಸಲಿಲ್ಲ ಎಂದು ಹೇಳಿದ್ದರು. ಗುಂಪಾಗಿ ಈ ತಂಡ ಏನು ಮಾಡಬಹುದು ಎಂದು ಮೊಬೈಲ್ ನಲ್ಲಿ ವೀಕ್ಷಣೆ ಮಾಡುತ್ತಿತ್ತು.

ಇಂದು ಪ್ರಾಜೆಕ್ಟ್ ಎಲ್ಲಾ ಕಾಲೇಜು, ಶಾಲೆಗಳಲ್ಲಿ  ಹೆಚ್ಚಾಗಿದೆ.  ಈ ಹೆಸರಲ್ಲಿ  ಅನೇಕ ಚರ್ಚೆಗಳು ನಡೆಯುತ್ತಿದೆ.   ಪ್ರಾಜೆಕ್ಟ್ ತಂಡದಲ್ಲಿ  ವಿದ್ಯಾರ್ಥಿ, ವಿದ್ಯಾರ್ಥಿನಿ ಎಂದು ಬೇಧವಿಲ್ಲದೆ ಎಲ್ಲರೂ ತೊಡಗಿಸಿಕೊಳ್ಳುತ್ತಾರೆ. ಒಂದಾಗಿಯೇ ಇರುತ್ತಾರೆ. ರಜಾ ದಿನವೂ ಪ್ರಾಜೆಕ್ಟ್ ಹೆಸರಲ್ಲಿ ಮಕ್ಕಳು ಮನೆ ಬಿಡುತ್ತಾರೆ. ಎಲ್ಲಿಗೆ ಹೋಗುತ್ತಾರೆ, ಯಾರು ಜೊತೆಯಲ್ಲಿ ಇರುತ್ತಾರೆ ಎಂಬ ಬಗ್ಗೆ ಕನಿಷ್ಟವಾಗಿಯೂ  ಪೋಷಕರು ವಿಚಾರಣೆ ಮಾಡದೇ ಇದ್ದರೆ ಮುಂದೆ ಅಪಾಯವೂ ಹೆಚ್ಚಿದೆ. ಹಾಗಂತ ಎಲ್ಲಾ ವಿದ್ಯಾರ್ಥಿಗಳು ದಾರಿ ತಪ್ಪುತ್ತಾರೆ ಅಂತಲ್ಲ. ಮೊಬೈಲ್ ಮೂಲಕ , ಗೂಗಲ್ ಮೂಲಕ ಹುಡುಕಾಡುತ್ತಾ ಹೋದಾಗ ಕಾಣುವ ಚಿತ್ರ ಎಳೆಯ ಮನಸ್ಸು ಬಿಡಿ ಹಿರಿಯರನ್ನೂ ಸೆಳೆಯುತ್ತದೆ. ಈಗ  ಕಾಲೇಜು  ಬಿಡಿ ಶಾಲೆಗೆ ಹೋಗುವ ಮಕ್ಕಳೇ ಮೊಬೈಲ್ ಹೊಂದಿರುತ್ತಾರೆ. ಹೆತ್ತವರಿಗೂ ಅನಿವಾರ್ಯವಾಗಿದೆ. ಅದರ ನಂತರ ಗಮನಿಸದೇ ಇದ್ದರೆ ಮಾತ್ರಾ ಅಪಾಯವೂ ಇದೆ. ಇದರ ಜೊತೆಗೆ ಮಾದಕ ವಸ್ತುಗಳೂ ಕಾಲೇಜು ವಠಾರದಲ್ಲಿ ಹೆಚ್ಚಾಗಿ ಸಿಗುವಂತೆ ಜಾಲಗಳೂ ಮಾಡುತ್ತವೆ. ಒಬ್ಬ ವಿದ್ಯಾರ್ಥಿಯ ಬಳಸಿ ಈ ಮೂಲಕ ವಿದ್ಯಾರ್ಥಿಗಳನ್ನು  ಸೆಳೆಯುವ ಜಾಲವೂ ಹರಡಿರುತ್ತದೆ ಎಂಬುದು ಇದುವರೆಗಿನ ಪೊಲೀಸ್ ತನಿಖೆಯಲ್ಲಿ  ಬೆಳಕಿಗೆ ಬಂದಿದೆ. ಹೀಗಾಗಿ ಎಚ್ಚರ ಇರಬೇಕಾದ್ದು ಪೋಷಕರು ಮೊದಲು. ಘಟನೆ ನಡೆದ ಬಳಿಕ ಪೊಲೀಸ್ ಇಲಾಖೆ, ಕಾಲೇಜು ಆಡಳಿತ ಮಂಡಳಿ ಸೇರಿದಂತೆ ಇನ್ಯರನ್ನೋ ದೂರಿದರೆ ಪ್ರಯೋಜನವಿಲ್ಲ. ಯಾವುದೇ ಘಟನೆಯಾದರೆ ಇಂದು ಮೊಬೈಲ್ ಮೂಲಕ ಸೆರೆಯಾಗುತ್ತದೆ ಬಳಿಕ ಕೆಲವು ದಿನದ ಬಳಿಕ ಅದುವೇ ವೈರಲ್ ಆಗುತ್ತದೆ. ಯಾವುದೇ ಸಂದರ್ಭದಲ್ಲಿ ಜಾಲಗಳಿಗೆ ಸಿಲುಕಿದ   ಹುಡುಗಿಯರು ಹೇಳಲಾಗದ ಸ್ಥಿತಿಯಲ್ಲಿ ಇರುತ್ತಾಳೆ. ಘಟನೆಯ ಬಳಿಕ ವಿದ್ಯಾರ್ಥಿಗಳನ್ನು  ಹಳಿದು ಪ್ರಯೋಜನವೇ ಇಲ್ಲ.

ಈ  ಎಲ್ಲಾ ಕಾರಣಕ್ಕೆ ಎಚ್ಚರಿಕೆ ಹೆಚ್ಚು ವಹಿಸಿದರೆ ಉತ್ತಮ. ಶಾಲೆ ಕಾಲೇಜು ಮಕ್ಕಳ ನಡವಳಿಕೆ , ಮೊಬೈಲ್ ಗಮನಿಸುವುದು, ಹೆತ್ತವರೇ ಆಗಾಗ ಪರಿಶೀಲನೆ ಮಾಡುವುದು ಹೆಚ್ಚು ಉತ್ತಮ. ಇದು ವಿಶ್ವಾಸದ ಕೊರತೆಯಲ್ಲ, ಮಕ್ಕಳ ಮೇಲೆ ಅಪನಂಬಿಕೆ ಪ್ರಶ್ನೆಯೂ ಅಲ್ಲ. ಸುರಕ್ಷತೆ ಹಾಗೂ ಭವಿಷ್ಯದ ಪ್ರಶ್ನೆ ಅಷ್ಟೇ. ಈ ಜವಾಬ್ದಾರಿ ಪೋಷಕರಿಗೂ ಇದೆಯಲ್ಲ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

18 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago