Advertisement
MIRROR FOCUS

ಶಾಲೆ ಪ್ರಾರಂಭದ ಬಗ್ಗೆ ಸ್ಪಷ್ಟನೆ ನೀಡಿದ ಶಿಕ್ಷಣ ಸಚಿವ ಸುರೇಶ್‌ ಕುಮಾರ್

Share

‌ಮಂಡ್ಯ: ಕೊರೋನಾ ಭೀತಿ ನಡುವೆಯೂ  ರಾಜ್ಯದಲ್ಲಿ ಸೆಪ್ಟೆಂಬರ್​​​​​​ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ, ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ ನಿಂದ ರಾಜ್ಯದಲ್ಲಿ ಶಾಲೆಗಳು ಪ್ರಾರಂಭಿಸಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್​ ಕುಮಾರ್​ ಸ್ಪಷ್ಟನೆ ನೀಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಹು ಮುಖ್ಯ ಆದ್ಯತೆ ಅಂದರೆ ಅದು ನಮ್ಮ ಮಕ್ಕಳ ಆರೋಗ್ಯ. ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ.  ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬುದನ್ನೂ ಹೇಳುತ್ತಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ  ಸೆಪ್ಟೆಂಬರ್​ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್​ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ಕಾಲದಲ್ಲಿ ನಮ್ಮ ಮಕ್ಕಳು ಯಾವುದೇ ಕಾರಣಕ್ಕೂ ಕೊರೋನಾ ಭೀತಿಗೆ ಒಳಗಾಗಬಾರದು. ಶಿಕ್ಷಕರು ಮಕ್ಕಳು ಇರುವ ಕಡೆ ಹೋಗಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ. ಇನ್ನು ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್​ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಶಿಕ್ಷಣ ಇಲಾಖೆಯಿಂದ ಸಮಾಜಕ್ಕೆ ಭರವಸೆ ನೀಡುವ ಕಾರ್ಯವಾಗ್ತಿದೆ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

51 minutes ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

57 minutes ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

12 hours ago

ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ

ರಾಜ್ಯ ಬಜೆಟ್‌ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…

12 hours ago

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ

ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…

16 hours ago

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

2 days ago