ಮಂಡ್ಯ: ಕೊರೋನಾ ಭೀತಿ ನಡುವೆಯೂ ರಾಜ್ಯದಲ್ಲಿ ಸೆಪ್ಟೆಂಬರ್ನಿಂದ ಶಾಲೆಗಳನ್ನು ಆರಂಭಿಸಲಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನಲೆಯಲ್ಲಿ, ಪೋಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಈ ಬಗ್ಗೆ ಗೊಂದಲಗಳು ಸಹ ಮೂಡಿವೆ. ಆದರೆ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ ನಿಂದ ರಾಜ್ಯದಲ್ಲಿ ಶಾಲೆಗಳು ಪ್ರಾರಂಭಿಸಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಬಹು ಮುಖ್ಯ ಆದ್ಯತೆ ಅಂದರೆ ಅದು ನಮ್ಮ ಮಕ್ಕಳ ಆರೋಗ್ಯ. ಈಗ ನಮ್ಮ ಮುಂದೆ ದೊಡ್ಡ ಸವಾಲು ಇದೆ. ಮುಂದಿನ ಶೈಕ್ಷಣಿಕ ದಿನಗಳು ಹೇಗೆ ಎಂದು ಯೋಚನೆ ಮಾಡುವಂತಾಗಿದೆ. ಸುರೇಶ್ ಕುಮಾರ್ ಶಾಲೆ ಪ್ರಾರಂಭ ಮಾಡಲು ತುದಿಗಾಲಿನಲ್ಲಿ ನಿಂತಿದ್ದಾರೆ ಎಂಬುದನ್ನೂ ಹೇಳುತ್ತಿದ್ದಾರೆ. ಖಂಡಿತ ಯಾವುದೇ ಕಾರಣಕ್ಕೂ ಸೆಪ್ಟೆಂಬರ್ನಿಂದ ಶಾಲೆಗಳನ್ನು ಪ್ರಾರಂಭಿಸಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಕೊರೋನಾ ಕಾಲದಲ್ಲಿ ನಮ್ಮ ಮಕ್ಕಳು ಯಾವುದೇ ಕಾರಣಕ್ಕೂ ಕೊರೋನಾ ಭೀತಿಗೆ ಒಳಗಾಗಬಾರದು. ಶಿಕ್ಷಕರು ಮಕ್ಕಳು ಇರುವ ಕಡೆ ಹೋಗಿ ಮಕ್ಕಳ ಕಲಿಕೆಗೆ ಪ್ರೋತ್ಸಾಹ ಕೊಟ್ಟು ಕಲಿಸುತ್ತಿದ್ದಾರೆ. ಇನ್ನು ಈಗಾಗಲೇ ಎಲ್ಲರ ಮನೆಗೆ ಪಠ್ಯ ಪುಸ್ತಕ ತಲುಪಿಸಿದ್ದೇವೆ. ಟಿವಿಯಲ್ಲಿ ಸೇತುಬಂಧ ಕಾರ್ಯಕ್ರಮ ಮಾಡ್ತಿದ್ದೇವೆ. ಶಿಕ್ಷಣ ಇಲಾಖೆಯಿಂದ ಎರಡು ಚಾನಲ್ಗಳನ್ನು ಪ್ರಾರಂಭಿಸುತ್ತಿದ್ದೇವೆ. ಎಲ್ಲಾ ತರಗತಿಗಳಿಗೆ ಪಾಠ ಮಾಡಲು ಸಿದ್ದತೆ ನಡೆದಿದೆ, ಪಠ್ಯಕ್ರಮ ಕೂಡ ಸಿದ್ಧವಾಗಿದೆ. ಶಿಕ್ಷಣ ಇಲಾಖೆಯಿಂದ ಸಮಾಜಕ್ಕೆ ಭರವಸೆ ನೀಡುವ ಕಾರ್ಯವಾಗ್ತಿದೆ ಎಂದು ಮಾಹಿತಿ ನೀಡಿದರು.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…