ಸುದ್ದಿಗಳು

ಶಾಸಕರನ್ನು ಖರೀದಿ ಮಾಡುವ ಬಿಜೆಪಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲ – ಎಂ.ವೆಂಕಪ್ಪ ಗೌಡ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ರಾಜ್ಯದಲ್ಲಿ ಶಾಸಕರನ್ನು ಖರೀದಿ ಮಾಡಿ ಸಮ್ಮಿಶ್ರ ಸರಕಾರವನ್ನು ಪತನಗೊಳಿಸಿದ ಬಿಜೆಪಿಗೆ ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇದೆಯೇ ಎಂದು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಹಾಗೂ ಸುಳ್ಯ ನ.ಪಂ. ಸದಸ್ಯ ಎಂ.ವೆಂಕಪ್ಪ ಗೌಡ ಪ್ರಶ್ನಿಸಿದ್ದಾರೆ.

Advertisement

ಸುಳ್ಯದಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನಡವಳಿಕೆ ಸಂವಿಧಾನದ ಕಗ್ಗೊಲೆ. ಮುಂದೆ ಇದರ ಪರಿಣಾಮ ಗೊತ್ತಾಗುತ್ತದೆ. ಹೀಗೆ ವಾಮಮಾರ್ಗದಲ್ಲಿ ಎಲ್ಲ ರಾಜ್ಯಗಳಲ್ಲೂ ಅಧಿಕಾರ ಹಿಡಿಯಲು ಪ್ರಯತ್ನಿಸಿದರೆ ಜನ ದಂಗೆ ಏಳುವ ಸ್ಥಿತಿ ಬರಬಹುದು.  ಬಿಜೆಪಿ ಕುದುರೆ ವ್ಯಾಪಾರದ ಮೂಲಕ ಶಾಸಕರನ್ನು ಖರೀದಿ ಮಾಡಿದೆ. ಅದು ಸರಿ ಎಂದಾದರೆ ಇಲ್ಲಿ ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಪರ ಮತ ಚಲಾಯಿಸಿದವರ ಮೇಲೆ ಯಾಕೆ ಕ್ರಮ ಕೈಗೊಂಡಿದ್ದಾರೆ. ಯಾಕೆ ಅಂತವರನ್ನು ಬಲಾತ್ಕಾರದಿಂದ ರಾಜೀನಾಮೆ ಕೊಡಿಸಿದಿರಿ ಎಂಬುದಕ್ಕೆ ಬಿಜೆಪಿ ನಾಯಕರು ಉತ್ತರಿಸಬೇಕು. ಸುಳ್ಯ ನ.ಪಂ.ನಲ್ಲಿ ನಾವು 4 ಸ್ಥಾನ ಗೆದ್ದಿದ್ದೇವೆ. 2 ಮಂದಿ ಪಕ್ಷೇತರರು ನಮ್ಮ ಜೊತೆಗಿದ್ದಾರೆ. ನಾವು ಅಧಿಕಾರ ನಡೆಸುತ್ತೇವೆ ಎಂದು ಬಿಜೆಪಿಯವರಿಗೆ ಆಹ್ವಾನ ಕೊಟ್ಟರೆ ಅವರ ಸದಸ್ಯರು ಬರುತ್ತಾರೆಯೇ, ಅದು ಸರಿ ಕಾಣುತ್ತದೆಯೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಪರವಾಗಿ ನಿಂತ ನಾಯಕ. ಅವರ ಸಾಲಮನ್ನಾ ಯೋಜನೆ ರೈತರಿಗೆ ಮುಟ್ಟಿದೆ. 1ಲಕ್ಷ ಸಾಲ ಮನ್ನಾ ಪಡೆದ ನಾಯಕರೊಬ್ಬರ ಮಗನೇ ನಿನ್ನೆ ಮುಖ್ಯಮಂತ್ರಿ ಸೋತ ಹಿನ್ನಲೆಯಲ್ಲಿ ಪಟಾಕಿ ಸಿಡಿಸುತ್ತಿದ್ದರು. ಇಂಥವರಿಗೆ ಕನಿಷ್ಟ ಕೃತಜ್ಞತೆ ಭಾವನೆಯಾದರೂ ಬೇಡವೇ ಎಂದು ಪ್ರಶ್ನಿಸಿದರು.
ಸಂವಿಧಾನದ ಎಲ್ಲ ಅಂಗಗಳನ್ನು ಕೇಂದ್ರ ಸರ್ಕಾರ ತನ್ನ ಕಪಿಮುಷ್ಟಿಗೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಖರೀದಿಯಾದ ಶಾಸಕರು ಮರಳಿ ಬಂದರೂ ಕಾಂಗ್ರೆಸ್ ಅವರಿಗೆ ಪ್ರವೇಶ ನೀಡದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಧರ್ಮಪಾಲ ಕೊಯಿಂಗಾಜೆ, ಮಹಮ್ಮದ್ ಪವಾಝ್ ಕನಕಮಜಲು , ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

2 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

5 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

8 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶರಧಿ.ಡಿ.ಎಸ್

ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…

11 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕೃತಿಕಾ

ಕೃತಿಕಾ, 9 ನೇ ತರಗತಿ, ಸೈಂಟ್‌ ಆನ್ಸ್‌ ಇಂಗ್ಲಿಷ್‌ ಮೀಡಿಯಂ ಶಾಲೆ, ಕಡಬ…

12 hours ago

ರಾಜ್ಯಾದ್ಯಂತ ಲಕ್ಷ ವೃಕ್ಷ ಗಿಡಗಳ ನಾಟಿ ಕಾರ್ಯಕ್ರಮ | ಹೆಬ್ರಿಯ ಉದ್ಯಾನವನದಲ್ಲಿ ಗಿಡ ನೆಡುವ ಮೂಲಕ ಚಾಲನೆ

ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…

12 hours ago