Advertisement
ಸುದ್ದಿಗಳು

ಶಾಸಕರನ್ನು ಖರೀದಿ ಮಾಡುವ ಬಿಜೆಪಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲ – ಎಂ.ವೆಂಕಪ್ಪ ಗೌಡ

Share

ಸುಳ್ಯ: ರಾಜ್ಯದಲ್ಲಿ ಶಾಸಕರನ್ನು ಖರೀದಿ ಮಾಡಿ ಸಮ್ಮಿಶ್ರ ಸರಕಾರವನ್ನು ಪತನಗೊಳಿಸಿದ ಬಿಜೆಪಿಗೆ ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇದೆಯೇ ಎಂದು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಹಾಗೂ ಸುಳ್ಯ ನ.ಪಂ. ಸದಸ್ಯ ಎಂ.ವೆಂಕಪ್ಪ ಗೌಡ ಪ್ರಶ್ನಿಸಿದ್ದಾರೆ.

ಸುಳ್ಯದಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನಡವಳಿಕೆ ಸಂವಿಧಾನದ ಕಗ್ಗೊಲೆ. ಮುಂದೆ ಇದರ ಪರಿಣಾಮ ಗೊತ್ತಾಗುತ್ತದೆ. ಹೀಗೆ ವಾಮಮಾರ್ಗದಲ್ಲಿ ಎಲ್ಲ ರಾಜ್ಯಗಳಲ್ಲೂ ಅಧಿಕಾರ ಹಿಡಿಯಲು ಪ್ರಯತ್ನಿಸಿದರೆ ಜನ ದಂಗೆ ಏಳುವ ಸ್ಥಿತಿ ಬರಬಹುದು.  ಬಿಜೆಪಿ ಕುದುರೆ ವ್ಯಾಪಾರದ ಮೂಲಕ ಶಾಸಕರನ್ನು ಖರೀದಿ ಮಾಡಿದೆ. ಅದು ಸರಿ ಎಂದಾದರೆ ಇಲ್ಲಿ ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಪರ ಮತ ಚಲಾಯಿಸಿದವರ ಮೇಲೆ ಯಾಕೆ ಕ್ರಮ ಕೈಗೊಂಡಿದ್ದಾರೆ. ಯಾಕೆ ಅಂತವರನ್ನು ಬಲಾತ್ಕಾರದಿಂದ ರಾಜೀನಾಮೆ ಕೊಡಿಸಿದಿರಿ ಎಂಬುದಕ್ಕೆ ಬಿಜೆಪಿ ನಾಯಕರು ಉತ್ತರಿಸಬೇಕು. ಸುಳ್ಯ ನ.ಪಂ.ನಲ್ಲಿ ನಾವು 4 ಸ್ಥಾನ ಗೆದ್ದಿದ್ದೇವೆ. 2 ಮಂದಿ ಪಕ್ಷೇತರರು ನಮ್ಮ ಜೊತೆಗಿದ್ದಾರೆ. ನಾವು ಅಧಿಕಾರ ನಡೆಸುತ್ತೇವೆ ಎಂದು ಬಿಜೆಪಿಯವರಿಗೆ ಆಹ್ವಾನ ಕೊಟ್ಟರೆ ಅವರ ಸದಸ್ಯರು ಬರುತ್ತಾರೆಯೇ, ಅದು ಸರಿ ಕಾಣುತ್ತದೆಯೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಪರವಾಗಿ ನಿಂತ ನಾಯಕ. ಅವರ ಸಾಲಮನ್ನಾ ಯೋಜನೆ ರೈತರಿಗೆ ಮುಟ್ಟಿದೆ. 1ಲಕ್ಷ ಸಾಲ ಮನ್ನಾ ಪಡೆದ ನಾಯಕರೊಬ್ಬರ ಮಗನೇ ನಿನ್ನೆ ಮುಖ್ಯಮಂತ್ರಿ ಸೋತ ಹಿನ್ನಲೆಯಲ್ಲಿ ಪಟಾಕಿ ಸಿಡಿಸುತ್ತಿದ್ದರು. ಇಂಥವರಿಗೆ ಕನಿಷ್ಟ ಕೃತಜ್ಞತೆ ಭಾವನೆಯಾದರೂ ಬೇಡವೇ ಎಂದು ಪ್ರಶ್ನಿಸಿದರು.
ಸಂವಿಧಾನದ ಎಲ್ಲ ಅಂಗಗಳನ್ನು ಕೇಂದ್ರ ಸರ್ಕಾರ ತನ್ನ ಕಪಿಮುಷ್ಟಿಗೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಖರೀದಿಯಾದ ಶಾಸಕರು ಮರಳಿ ಬಂದರೂ ಕಾಂಗ್ರೆಸ್ ಅವರಿಗೆ ಪ್ರವೇಶ ನೀಡದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಧರ್ಮಪಾಲ ಕೊಯಿಂಗಾಜೆ, ಮಹಮ್ಮದ್ ಪವಾಝ್ ಕನಕಮಜಲು , ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

8 hours ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

20 hours ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

1 day ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

1 day ago

ತೆಂಗಿನ ನಾಡಿನಲ್ಲಿ ಅಡಿಕೆ ಕ್ರಾಂತಿ….! ತುಮಕೂರಿನಲ್ಲಿ ಅಡಿಕೆ ಸಸಿಗಳಿಗೆ ಭಾರೀ ಬೇಡಿಕೆ

ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…

1 day ago

ಹವಾಮಾನ ವರದಿ | 19-07-2026 | ಜುಲೈ 20 ರಿಂದ ಮಳೆ ಇಳಿಮುಖ…! ಕರಾವಳಿ–ಮಲೆನಾಡಿನಲ್ಲಿ ಮಾತ್ರ ಅಲ್ಲಲ್ಲಿ ಮಳೆ ಮುಂದುವರಿಕೆ

ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…

2 days ago