Advertisement
ಸುದ್ದಿಗಳು

ಶಾಸಕರನ್ನು ಖರೀದಿ ಮಾಡುವ ಬಿಜೆಪಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇಲ್ಲ – ಎಂ.ವೆಂಕಪ್ಪ ಗೌಡ

Share

ಸುಳ್ಯ: ರಾಜ್ಯದಲ್ಲಿ ಶಾಸಕರನ್ನು ಖರೀದಿ ಮಾಡಿ ಸಮ್ಮಿಶ್ರ ಸರಕಾರವನ್ನು ಪತನಗೊಳಿಸಿದ ಬಿಜೆಪಿಗೆ ಡಿ.ಸಿ.ಸಿ.ಬ್ಯಾಂಕ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಕೈಗೊಳ್ಳುವ ನೈತಿಕತೆ ಇದೆಯೇ ಎಂದು ಕೆ.ಪಿ.ಸಿ.ಸಿ. ಮಾಜಿ ಕಾರ್ಯದರ್ಶಿ ಹಾಗೂ ಸುಳ್ಯ ನ.ಪಂ. ಸದಸ್ಯ ಎಂ.ವೆಂಕಪ್ಪ ಗೌಡ ಪ್ರಶ್ನಿಸಿದ್ದಾರೆ.

Advertisement
Advertisement

ಸುಳ್ಯದಲ್ಲಿ ಸುದ್ದಿಗೋಷ್ಠಿನ್ನುದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ನಡವಳಿಕೆ ಸಂವಿಧಾನದ ಕಗ್ಗೊಲೆ. ಮುಂದೆ ಇದರ ಪರಿಣಾಮ ಗೊತ್ತಾಗುತ್ತದೆ. ಹೀಗೆ ವಾಮಮಾರ್ಗದಲ್ಲಿ ಎಲ್ಲ ರಾಜ್ಯಗಳಲ್ಲೂ ಅಧಿಕಾರ ಹಿಡಿಯಲು ಪ್ರಯತ್ನಿಸಿದರೆ ಜನ ದಂಗೆ ಏಳುವ ಸ್ಥಿತಿ ಬರಬಹುದು.  ಬಿಜೆಪಿ ಕುದುರೆ ವ್ಯಾಪಾರದ ಮೂಲಕ ಶಾಸಕರನ್ನು ಖರೀದಿ ಮಾಡಿದೆ. ಅದು ಸರಿ ಎಂದಾದರೆ ಇಲ್ಲಿ ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯ ಪರ ಮತ ಚಲಾಯಿಸಿದವರ ಮೇಲೆ ಯಾಕೆ ಕ್ರಮ ಕೈಗೊಂಡಿದ್ದಾರೆ. ಯಾಕೆ ಅಂತವರನ್ನು ಬಲಾತ್ಕಾರದಿಂದ ರಾಜೀನಾಮೆ ಕೊಡಿಸಿದಿರಿ ಎಂಬುದಕ್ಕೆ ಬಿಜೆಪಿ ನಾಯಕರು ಉತ್ತರಿಸಬೇಕು. ಸುಳ್ಯ ನ.ಪಂ.ನಲ್ಲಿ ನಾವು 4 ಸ್ಥಾನ ಗೆದ್ದಿದ್ದೇವೆ. 2 ಮಂದಿ ಪಕ್ಷೇತರರು ನಮ್ಮ ಜೊತೆಗಿದ್ದಾರೆ. ನಾವು ಅಧಿಕಾರ ನಡೆಸುತ್ತೇವೆ ಎಂದು ಬಿಜೆಪಿಯವರಿಗೆ ಆಹ್ವಾನ ಕೊಟ್ಟರೆ ಅವರ ಸದಸ್ಯರು ಬರುತ್ತಾರೆಯೇ, ಅದು ಸರಿ ಕಾಣುತ್ತದೆಯೇ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ರೈತರ ಪರವಾಗಿ ನಿಂತ ನಾಯಕ. ಅವರ ಸಾಲಮನ್ನಾ ಯೋಜನೆ ರೈತರಿಗೆ ಮುಟ್ಟಿದೆ. 1ಲಕ್ಷ ಸಾಲ ಮನ್ನಾ ಪಡೆದ ನಾಯಕರೊಬ್ಬರ ಮಗನೇ ನಿನ್ನೆ ಮುಖ್ಯಮಂತ್ರಿ ಸೋತ ಹಿನ್ನಲೆಯಲ್ಲಿ ಪಟಾಕಿ ಸಿಡಿಸುತ್ತಿದ್ದರು. ಇಂಥವರಿಗೆ ಕನಿಷ್ಟ ಕೃತಜ್ಞತೆ ಭಾವನೆಯಾದರೂ ಬೇಡವೇ ಎಂದು ಪ್ರಶ್ನಿಸಿದರು.
ಸಂವಿಧಾನದ ಎಲ್ಲ ಅಂಗಗಳನ್ನು ಕೇಂದ್ರ ಸರ್ಕಾರ ತನ್ನ ಕಪಿಮುಷ್ಟಿಗೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಖರೀದಿಯಾದ ಶಾಸಕರು ಮರಳಿ ಬಂದರೂ ಕಾಂಗ್ರೆಸ್ ಅವರಿಗೆ ಪ್ರವೇಶ ನೀಡದು ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರಾದ ಧರ್ಮಪಾಲ ಕೊಯಿಂಗಾಜೆ, ಮಹಮ್ಮದ್ ಪವಾಝ್ ಕನಕಮಜಲು , ಲಕ್ಷ್ಮಣ ಶೆಣೈ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

13 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

13 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

13 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

13 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

13 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

13 hours ago