ಸುಳ್ಯ:ಶಾಸಕ ಎಸ್.ಅಂಗಾರ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು ಬಿಜೆಪಿಯಲ್ಲಿ ರಾಜಿನಾಮೆ ಪರ್ವ ಆರಂಭಗೊಂಡಿದೆ.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಬಿಜೆಪಿ ಪ್ರಮುಖರ ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಬಿಜೆಪಿಯಿಂದ ಆರಿಸಿ ಬಂದ ಜನಪ್ರತಿಗಳು, ಪಕ್ಷದ ಜವಾಬ್ದಾರಿ ಇರುವ ಮುಖಂಡರು ತಮ್ಮ ಹುದ್ದೆಗಳಿಗೆ ರಾಜಿನಾಮೆ ನೀಡಲು ಮುಂದಾಗಿದ್ದಾರೆ. ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ಎಪಿಎಂಸಿ, ಸಹಕಾರಿ ಸಂಘಗಳ ಸದಸ್ಯರು ಸೇರಿ ನೂರಕ್ಕೂ ಹೆಚ್ಚು ಮಂದಿ ತಮ್ಮ ರಾಜಿನಾಮೆಯನ್ನು ಘೋಷಿಸಿ ರಾಜಿನಾಮೆ ಪತ್ರವನ್ನು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷರಿಗೆ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳು, ಪಕ್ಷದ ನಾಯಕರು ತಮ್ಮ ಹುದ್ದೆಗೆ ಸ್ವಯಂಪ್ರೇರಿತರಾಗಿ ರಾಜಿನಾಮೆ ನೀಡಿದ್ದಾರೆ ಎಂದು ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ತಿಳಿಸಿದ್ದಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…