Advertisement
ಸುದ್ದಿಗಳು

ಶಾಸಕರಿಗೆ ಸಚಿವ ಸ್ಥಾನ – ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸಿಎಂ ಬಳಿ ನಿಯೋಗ

Share

ಸುಳ್ಯ:ಶಾಸಕ ಎಸ್‌.ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಲ್ಲಿಗೆ ನಿಯೋಗ ತೆರಳಲು ನಿರ್ಧರಿಸಲಾಗಿದೆ.

ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿದ ಕಾರಣ ತೀವ್ರ ಆಕ್ರೋಶ ಉಂಟಾಗಿರುವ ಮತ್ತು ಬಿಜೆಪಿ ಅಸಹಕಾರ ಚಳವಳಿ ಘೋಷಿಸಿರುವ ಹಿನ್ನಲೆಯಲ್ಲಿ
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮಾಜಿ ವಿಧಾ‌ನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರಣಿಕ್ ಶನಿವಾರ ಸುಳ್ಯಕ್ಕೆ ಆಗಮಿಸಿ ಸುಳ್ಯ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು.
ಸುಳ್ಯದ ಸಂಘಟನೆ ಹಾಗೂ ಕಾರ್ಯಕರ್ತರ ಆಗ್ರಹವನ್ನು ಪರಿಗಣಿಸಿ ಅತಿ ಶೀಘ್ರವಾಗಿ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರ ಹಾಗೂ ಸುಳ್ಯದ ಬಿಜೆಪಿಯ ಪ್ರಮುಖರ ನಿಯೋಗವು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಂಗಾರರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಲು ತೀರ್ಮಾನಿಸಲಾಯಿತು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ. ಎಸ್.ಎನ್.ಮನ್ಮಥ, ಕೃಷ್ಣ ಶೆಟ್ಟಿ ಕಡಬ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

2 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

10 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

17 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

17 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

2 days ago