Advertisement
ಸುದ್ದಿಗಳು

ಶಾಸಕರಿಗೆ ಸಚಿವ ಸ್ಥಾನ – ಬಿಜೆಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಸಿಎಂ ಬಳಿ ನಿಯೋಗ

Share

ಸುಳ್ಯ:ಶಾಸಕ ಎಸ್‌.ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಜೊತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಲ್ಲಿಗೆ ನಿಯೋಗ ತೆರಳಲು ನಿರ್ಧರಿಸಲಾಗಿದೆ.

ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ತಪ್ಪಿದ ಕಾರಣ ತೀವ್ರ ಆಕ್ರೋಶ ಉಂಟಾಗಿರುವ ಮತ್ತು ಬಿಜೆಪಿ ಅಸಹಕಾರ ಚಳವಳಿ ಘೋಷಿಸಿರುವ ಹಿನ್ನಲೆಯಲ್ಲಿ
ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಮಾಜಿ ವಿಧಾ‌ನ ಪರಿಷತ್ ಸದಸ್ಯರಾದ ಮೋನಪ್ಪ ಭಂಡಾರಿ, ಕ್ಯಾಪ್ಟನ್ ಗಣೇಶ್ ಕಾರಣಿಕ್ ಶನಿವಾರ ಸುಳ್ಯಕ್ಕೆ ಆಗಮಿಸಿ ಸುಳ್ಯ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದರು.
ಸುಳ್ಯದ ಸಂಘಟನೆ ಹಾಗೂ ಕಾರ್ಯಕರ್ತರ ಆಗ್ರಹವನ್ನು ಪರಿಗಣಿಸಿ ಅತಿ ಶೀಘ್ರವಾಗಿ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಜಿಲ್ಲೆಯ ಎಲ್ಲಾ ಶಾಸಕರ ಹಾಗೂ ಸುಳ್ಯದ ಬಿಜೆಪಿಯ ಪ್ರಮುಖರ ನಿಯೋಗವು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಂಗಾರರಿಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಲು ತೀರ್ಮಾನಿಸಲಾಯಿತು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ, ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ, ಪ್ರಮುಖರಾದ ಎ.ವಿ.ತೀರ್ಥರಾಮ, ವೆಂಕಟ್ ದಂಬೆಕೋಡಿ, ಹರೀಶ್ ಕಂಜಿಪಿಲಿ. ಎಸ್.ಎನ್.ಮನ್ಮಥ, ಕೃಷ್ಣ ಶೆಟ್ಟಿ ಕಡಬ ಮತ್ತಿತರರು ಚರ್ಚೆಯಲ್ಲಿ ಭಾಗವಹಿಸಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

12 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

23 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

24 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

24 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago