ಶಾಸಕ ಅಂಗಾರರಿಗೆ ಒಲಿಯಲಿದೆಯೇ ಸಚಿವ ಸ್ಥಾನ ?

July 30, 2020
2:31 PM

ಮಂಗಳೂರು: ಈ ಬಾರಿ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆಯೇ ? ಹೀಗೊಂದು ಚರ್ಚೆ ಈಗ ಆರಂಭವಾಗಿದೆ.  ಸಚಿವ ಸಂಪುಟ ಪುನರ್‌ ರಚನೆಯಾಗಲಿದ್ದು ಈ ಸಂದರ್ಭ ಕೆಲ ಸಚಿವರನ್ನು  ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡುವ ಬಗ್ಗೆ ಬಿಜೆಪಿ ಪಕ್ಷದ ಉನ್ನತ ಮಟ್ಟದಲ್ಲಿ  ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಈ ಬಾರಿ ಸುಳ್ಯದ ಶಾಸಕ, ಬಿಜೆಪಿಯ ಭಧ್ರಕೋಟೆ ಎನಿಸಿರುವ 6 ಬಾರಿ ಆಯ್ಕೆಯಾದ, ಹಿರಿಯರೂ ಆದ  ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಸುಳ್ಯಕ್ಕೆ ಮಾನ್ಯತೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ  ಲಭ್ಯವಾಗಿರಲಿಲ್ಲ. ಈ ಸಂದರ್ಭ ಸುಳ್ಯದ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿ ಬಳಿಕ ಅಸಹಕಾರ ವ್ಯಕ್ತಪಡಿಸಿತ್ತು. ಆ ಬಳಿಕ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರು ರಾಜ್ಯಾಧ್ಯಕ್ಷರಾದ ಬಳಿಕ ಅಸಹಕಾರದ ಬಗ್ಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದ್ದರು. ಆ ಬಳಿಕ ನಿಗಮ ಮಂಡಳಿಯ ಅಧ್ಯಕ್ಷತೆ ನೀಡುವುದಾಗಿ ಭರವಸೆಯನ್ನು ಪಕ್ಷದ ಪ್ರಮುಖರು ನೀಡಿದ್ದಾರೆ ಎಂದು ಸುಳ್ಯ ಬಿಜೆಪಿ ಹೇಳಿತ್ತು. ಇದೀಗ ಮತ್ತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ  ಚರ್ಚೆ ಆರಂಭವಾದ ಬೆನ್ನಿಗೇ ಶಾಸಕ ಅಂಗಾರ ಅವರ ಹೆಸರೂ ಕೇಳಿಬಂದಿದೆ. ಸುಳ್ಯಕ್ಕೆ ದಕ್ಕುವುದೇ  ಸಚಿವ ಸ್ಥಾನ ಎಂದು ಕಾದು ನೋಡಬೇಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು
March 3, 2026
10:34 PM
by: ಮಿರರ್‌ ಡೆಸ್ಕ್
ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು
March 3, 2026
9:51 PM
by: ಮಿರರ್‌ ಡೆಸ್ಕ್
ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ
March 3, 2026
9:28 PM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ
March 3, 2026
2:15 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror