ಮಂಗಳೂರು: ಈ ಬಾರಿ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆಯೇ ? ಹೀಗೊಂದು ಚರ್ಚೆ ಈಗ ಆರಂಭವಾಗಿದೆ. ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು ಈ ಸಂದರ್ಭ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡುವ ಬಗ್ಗೆ ಬಿಜೆಪಿ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಸುಳ್ಯದ ಶಾಸಕ, ಬಿಜೆಪಿಯ ಭಧ್ರಕೋಟೆ ಎನಿಸಿರುವ 6 ಬಾರಿ ಆಯ್ಕೆಯಾದ, ಹಿರಿಯರೂ ಆದ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಸುಳ್ಯಕ್ಕೆ ಮಾನ್ಯತೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಲಭ್ಯವಾಗಿರಲಿಲ್ಲ. ಈ ಸಂದರ್ಭ ಸುಳ್ಯದ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿ ಬಳಿಕ ಅಸಹಕಾರ ವ್ಯಕ್ತಪಡಿಸಿತ್ತು. ಆ ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷರಾದ ಬಳಿಕ ಅಸಹಕಾರದ ಬಗ್ಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದ್ದರು. ಆ ಬಳಿಕ ನಿಗಮ ಮಂಡಳಿಯ ಅಧ್ಯಕ್ಷತೆ ನೀಡುವುದಾಗಿ ಭರವಸೆಯನ್ನು ಪಕ್ಷದ ಪ್ರಮುಖರು ನೀಡಿದ್ದಾರೆ ಎಂದು ಸುಳ್ಯ ಬಿಜೆಪಿ ಹೇಳಿತ್ತು. ಇದೀಗ ಮತ್ತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾದ ಬೆನ್ನಿಗೇ ಶಾಸಕ ಅಂಗಾರ ಅವರ ಹೆಸರೂ ಕೇಳಿಬಂದಿದೆ. ಸುಳ್ಯಕ್ಕೆ ದಕ್ಕುವುದೇ ಸಚಿವ ಸ್ಥಾನ ಎಂದು ಕಾದು ನೋಡಬೇಕಿದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…