ಮಂಗಳೂರು: ಈ ಬಾರಿ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆಯೇ ? ಹೀಗೊಂದು ಚರ್ಚೆ ಈಗ ಆರಂಭವಾಗಿದೆ. ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು ಈ ಸಂದರ್ಭ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡುವ ಬಗ್ಗೆ ಬಿಜೆಪಿ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಸುಳ್ಯದ ಶಾಸಕ, ಬಿಜೆಪಿಯ ಭಧ್ರಕೋಟೆ ಎನಿಸಿರುವ 6 ಬಾರಿ ಆಯ್ಕೆಯಾದ, ಹಿರಿಯರೂ ಆದ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಸುಳ್ಯಕ್ಕೆ ಮಾನ್ಯತೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಲಭ್ಯವಾಗಿರಲಿಲ್ಲ. ಈ ಸಂದರ್ಭ ಸುಳ್ಯದ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿ ಬಳಿಕ ಅಸಹಕಾರ ವ್ಯಕ್ತಪಡಿಸಿತ್ತು. ಆ ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷರಾದ ಬಳಿಕ ಅಸಹಕಾರದ ಬಗ್ಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದ್ದರು. ಆ ಬಳಿಕ ನಿಗಮ ಮಂಡಳಿಯ ಅಧ್ಯಕ್ಷತೆ ನೀಡುವುದಾಗಿ ಭರವಸೆಯನ್ನು ಪಕ್ಷದ ಪ್ರಮುಖರು ನೀಡಿದ್ದಾರೆ ಎಂದು ಸುಳ್ಯ ಬಿಜೆಪಿ ಹೇಳಿತ್ತು. ಇದೀಗ ಮತ್ತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾದ ಬೆನ್ನಿಗೇ ಶಾಸಕ ಅಂಗಾರ ಅವರ ಹೆಸರೂ ಕೇಳಿಬಂದಿದೆ. ಸುಳ್ಯಕ್ಕೆ ದಕ್ಕುವುದೇ ಸಚಿವ ಸ್ಥಾನ ಎಂದು ಕಾದು ನೋಡಬೇಕಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…