ಮಂಗಳೂರು: ಈ ಬಾರಿ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆಯೇ ? ಹೀಗೊಂದು ಚರ್ಚೆ ಈಗ ಆರಂಭವಾಗಿದೆ. ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು ಈ ಸಂದರ್ಭ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡುವ ಬಗ್ಗೆ ಬಿಜೆಪಿ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಸುಳ್ಯದ ಶಾಸಕ, ಬಿಜೆಪಿಯ ಭಧ್ರಕೋಟೆ ಎನಿಸಿರುವ 6 ಬಾರಿ ಆಯ್ಕೆಯಾದ, ಹಿರಿಯರೂ ಆದ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಸುಳ್ಯಕ್ಕೆ ಮಾನ್ಯತೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಲಭ್ಯವಾಗಿರಲಿಲ್ಲ. ಈ ಸಂದರ್ಭ ಸುಳ್ಯದ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿ ಬಳಿಕ ಅಸಹಕಾರ ವ್ಯಕ್ತಪಡಿಸಿತ್ತು. ಆ ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷರಾದ ಬಳಿಕ ಅಸಹಕಾರದ ಬಗ್ಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದ್ದರು. ಆ ಬಳಿಕ ನಿಗಮ ಮಂಡಳಿಯ ಅಧ್ಯಕ್ಷತೆ ನೀಡುವುದಾಗಿ ಭರವಸೆಯನ್ನು ಪಕ್ಷದ ಪ್ರಮುಖರು ನೀಡಿದ್ದಾರೆ ಎಂದು ಸುಳ್ಯ ಬಿಜೆಪಿ ಹೇಳಿತ್ತು. ಇದೀಗ ಮತ್ತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾದ ಬೆನ್ನಿಗೇ ಶಾಸಕ ಅಂಗಾರ ಅವರ ಹೆಸರೂ ಕೇಳಿಬಂದಿದೆ. ಸುಳ್ಯಕ್ಕೆ ದಕ್ಕುವುದೇ ಸಚಿವ ಸ್ಥಾನ ಎಂದು ಕಾದು ನೋಡಬೇಕಿದೆ.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…