ಮಂಗಳೂರು: ಈ ಬಾರಿ ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ಲಭ್ಯವಾಗಲಿದೆಯೇ ? ಹೀಗೊಂದು ಚರ್ಚೆ ಈಗ ಆರಂಭವಾಗಿದೆ. ಸಚಿವ ಸಂಪುಟ ಪುನರ್ ರಚನೆಯಾಗಲಿದ್ದು ಈ ಸಂದರ್ಭ ಕೆಲ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಆದ್ಯತೆ ನೀಡುವ ಬಗ್ಗೆ ಬಿಜೆಪಿ ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಈ ಬಾರಿ ಸುಳ್ಯದ ಶಾಸಕ, ಬಿಜೆಪಿಯ ಭಧ್ರಕೋಟೆ ಎನಿಸಿರುವ 6 ಬಾರಿ ಆಯ್ಕೆಯಾದ, ಹಿರಿಯರೂ ಆದ ಸುಳ್ಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಕಳೆದ ಬಾರಿ ಸಚಿವ ಸಂಪುಟ ರಚನೆ ವೇಳೆ ಸುಳ್ಯಕ್ಕೆ ಮಾನ್ಯತೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಲಭ್ಯವಾಗಿರಲಿಲ್ಲ. ಈ ಸಂದರ್ಭ ಸುಳ್ಯದ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿ ಬಳಿಕ ಅಸಹಕಾರ ವ್ಯಕ್ತಪಡಿಸಿತ್ತು. ಆ ಬಳಿಕ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷರಾದ ಬಳಿಕ ಅಸಹಕಾರದ ಬಗ್ಗೆ ಮಾತುಕತೆ ನಡೆಸಿ ಸಮಾಧಾನಪಡಿಸಿದ್ದರು. ಆ ಬಳಿಕ ನಿಗಮ ಮಂಡಳಿಯ ಅಧ್ಯಕ್ಷತೆ ನೀಡುವುದಾಗಿ ಭರವಸೆಯನ್ನು ಪಕ್ಷದ ಪ್ರಮುಖರು ನೀಡಿದ್ದಾರೆ ಎಂದು ಸುಳ್ಯ ಬಿಜೆಪಿ ಹೇಳಿತ್ತು. ಇದೀಗ ಮತ್ತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಆರಂಭವಾದ ಬೆನ್ನಿಗೇ ಶಾಸಕ ಅಂಗಾರ ಅವರ ಹೆಸರೂ ಕೇಳಿಬಂದಿದೆ. ಸುಳ್ಯಕ್ಕೆ ದಕ್ಕುವುದೇ ಸಚಿವ ಸ್ಥಾನ ಎಂದು ಕಾದು ನೋಡಬೇಕಿದೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…