ಶಾಸಕ ಅಂಗಾರರಿಗೆ ಸಚಿವ ಸ್ಥಾನ ಪಡೆಯಲು ಎಲ್ಲಾ ಪ್ರಯತ್ನ- ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು

August 24, 2019
9:42 PM

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಶಾಸಕರಾದ ಎಸ್.ಅಂಗಾರ ಅವರಿಗೆ ಸಚಿವ ಸಂಪುಟದಲ್ಲಿ ಮಂತ್ರಿಸ್ಥಾನ ದೊರೆಯಬಹುದು ಎಂಬ ನಿರೀಕ್ಷೆ ಇತ್ತು. ಆರು ಬಾರಿ ಗೆದ್ದಿರುವ ಸರಳ ಸಜ್ಜನ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನಮ್ಮೆಲ್ಲರ ಅಪೇಕ್ಷೆಯೂ ಆಗಿತ್ತು. ಆದರೆ ಕಾರಣಾಂತರಗಳಿಂದ ಈ ಬಾರಿ ತಪ್ಪಿ ಹೋಗಿದೆ. ಮುಂದೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಂಗಾರರಿಗೆ ಸಚಿವ ಸ್ಥಾನ ದೊರೆಯುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನೂ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಶನಿವಾರ ಸುಳ್ಯಕ್ಕೆ ಆಗಮಿಸಿ ಶಾಸಕ ಎಸ್.ಅಂಗಾರ ಮತ್ತು ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಿದ ಬಳಿಕ ತಮ್ಮನ್ನು ಸಂಪರ್ಕಿಸಿದ ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಸಂಜೀವ ಮಠಂದೂರು ಮುಂದಿನ ದಿನಗಳಲ್ಲಿ ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದ್ದು ಹಿರಿಯ ಶಾಸಕರಾದ ಅಂಗಾರರು ಸಚಿವರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಬಿಜೆಪಿ ಪ್ರಮುಖರ ನಿಯೋಗ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror