Advertisement
ಸುದ್ದಿಗಳು

ಶಾಸಕ ಅಂಗಾರರಿಗೆ ಸಚಿವ ಸ್ಥಾನ ಪಡೆಯಲು ಎಲ್ಲಾ ಪ್ರಯತ್ನ- ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು

Share

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಶಾಸಕರಾದ ಎಸ್.ಅಂಗಾರ ಅವರಿಗೆ ಸಚಿವ ಸಂಪುಟದಲ್ಲಿ ಮಂತ್ರಿಸ್ಥಾನ ದೊರೆಯಬಹುದು ಎಂಬ ನಿರೀಕ್ಷೆ ಇತ್ತು. ಆರು ಬಾರಿ ಗೆದ್ದಿರುವ ಸರಳ ಸಜ್ಜನ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ನಮ್ಮೆಲ್ಲರ ಅಪೇಕ್ಷೆಯೂ ಆಗಿತ್ತು. ಆದರೆ ಕಾರಣಾಂತರಗಳಿಂದ ಈ ಬಾರಿ ತಪ್ಪಿ ಹೋಗಿದೆ. ಮುಂದೆ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅಂಗಾರರಿಗೆ ಸಚಿವ ಸ್ಥಾನ ದೊರೆಯುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನೂ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗು ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಶನಿವಾರ ಸುಳ್ಯಕ್ಕೆ ಆಗಮಿಸಿ ಶಾಸಕ ಎಸ್.ಅಂಗಾರ ಮತ್ತು ಬಿಜೆಪಿ ಮುಖಂಡರ ಜೊತೆ ಚರ್ಚೆ ನಡೆಸಿದ ಬಳಿಕ ತಮ್ಮನ್ನು ಸಂಪರ್ಕಿಸಿದ ಮಾಧ್ಯಮ ಪ್ರತಿನಿಧಿಗಳ ಮಾತನಾಡಿದ ಸಂಜೀವ ಮಠಂದೂರು ಮುಂದಿನ ದಿನಗಳಲ್ಲಿ ಜಿಲ್ಲೆಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದ್ದು ಹಿರಿಯ ಶಾಸಕರಾದ ಅಂಗಾರರು ಸಚಿವರಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಬಿಜೆಪಿ ಪ್ರಮುಖರ ನಿಯೋಗ ತೆರಳಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಲಾಗುವುದು ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 20.05.2026 | ಮೇ 26 ಬಳಿಕ ಕರ್ನಾಟಕಕ್ಕೆ ಮುಂಗಾರು ಎಂಟ್ರಿ ಸಾಧ್ಯತೆ| ಕರಾವಳಿಯಲ್ಲಿ ಮಳೆ ಕುಂಠಿತ, ಉತ್ತರ ಭಾರತಕ್ಕೆ ಮಳೆ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…

4 hours ago

ಉತ್ತರ ಭಾರತ ಉರಿಯುತ್ತಿದೆ – ಮೇ 25ರವರೆಗೆ ತೀವ್ರ ಬಿಸಿಗಾಳಿ ಎಚ್ಚರಿಕೆ

ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…

12 hours ago

ರಾಸಾಯನಿಕ ಗೊಬ್ಬರ ಕೊರತೆ ಭೀತಿ‌ ; ಸಾವಯವ ಕೃಷಿಯತ್ತ ಗಮನಹರಿಸಲು ರೈತರಿಗೆ ಕೇಂದ್ರ ಸಚಿವರ ಕರೆ

ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…

12 hours ago

ಮೋಹಿತ್‌ ನಗರ್‌ ಅಡಿಕೆ ಗಿಡ ಏಕೆ ರೈತರ ಫೇವರಿಟ್‌..? ಹೆಚ್ಚು ಇಳುವರಿ, ವೇಗದ ಬೆಳವಣಿಗೆ ಇದರ ವಿಶೇಷತೆ..!

ಮೋಹಿತ್‌ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…

19 hours ago

ಹವಾಮಾನ ವರದಿ | 19-05-2026 | ಕರಾವಳಿಯಲ್ಲಿ ಮಳೆ ಕ್ಷೀಣಿಸುವ ಲಕ್ಷಣ – ಮೇ 27ರ ಸುಮಾರಿಗೆ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…

1 day ago

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

2 days ago