ನಮ್ಮೂರ ಸುದ್ದಿ

ಶಾಸಕ ಅಂಗಾರ ಅವರಿಂದ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಾಡಾವು :  ಮಾಡಾವು 110 ಕೆವಿ ವಿದ್ಯುತ್ ಸಬ್‍ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು ಸುಳ್ಯ ಶಾಸಕ ಎಸ್ ಅಂಗಾರ  ಶುಕ್ರವಾರ ಭೇಟಿ ನೀಡಿ ಕೆಪಿಟಿಸಿಎಲ್ ಅಧಿಕಾರಿಗಳಿಂದ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.

Advertisement
Advertisement

ಕೆಪಿಟಿಸಿಎಲ್ ಸುಪರಿಟೆಂಡಿಂಗ್ ಎಂಜಿನಿಯರ್ ರವಿಕಾಂತ್ ಕಾಮತ್ ಕಾಮಗಾರಿ ಕುರಿತಂತೆ ಮಾಹಿತಿ ನೀಡಿ ಆಗಸ್ಟ್ ವೇಳೆಗೆ  ಸಬ್‍ಸ್ಟೇಶನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ನೆಟ್ಲಮುಡ್ನೂರಿನಿಂದ ಕಬಕ ಮೂಲಕ ಮಾಡಾವಿಗೆ 110 ಕೆ ವಿ ವಿದ್ಯುತ್ ಸರಬರಾಜು ಮಾಡುವ ಯೋಜನೆ ಇದಾಗಿದ್ದು ಬೊಳಿಕಳದಲ್ಲಿ ಸುಮಾರು 4 ಎಕರೆ ಪ್ರದೇಶದಲ್ಲಿ ಸಬ್‍ಸ್ಟೇಷನ್ ನಿರ್ಮಾಣದ ಕಾಮಗಾರಿ  ಪ್ರಗತಿಯಲ್ಲಿದೆ.

ಶಾಸಕರು ಬೆಂಗಳೂರಿನಲ್ಲಿ ಕೆ.ಪಿ.ಟಿ.ಸಿ.ಎಲ್.  ಎಂ ಡಿ ಅವರನ್ನು ಕಳೆದ ವಾರ ಭೇಟಿಯಾಗಿದ್ದರು. ಕಾಮಗಾರಿಯನ್ನು ಶೀಘ್ರ ಪೂರೈಸಲು ಅಗತ್ಯವುಳ್ಳ ಎಲ್ಲಾ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಬ್ ಸ್ಟೇಷನ್ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮಳೆಗಾಲ ಆರಂಭಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಗಿದು, ಇದೇ ಆಗಸ್ಟ್ ವೇಳೆಗೆ ಬಿಟ್ಟುಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಲೈನ್ ಕೆಲಸದ ಬಗ್ಗೆ ಇರುವ ಅಡೆತಡೆ ನಿವಾರಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಅಂಗಾರ ತಿಳಿಸಿದರು.

ಕಾಮಗಾರಿ ಕುರಿತಂತೆ ಕೆಪಿಟಿಸಿಎಲ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಗಂಗಾಧರ,ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸತೀಶ್ , ಅಸಿಸ್ಟೆಂಟ್ ಎಂಜಿನಿಯರ್ ಬಸವರಾಜು,ಪ್ರಾಜೆಕ್ಟ್ ಎಂಜಿನಿಯರ್ ವಿಜೆಂದ್ರ ಮಾಹಿತಿ ನೀಡಿದರು.

Advertisement

ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುಳ್ಯ ಕಿಸಾನ್ ಸಂಘದ ಪ್ರಮುಖರಾದ ಪಿಜಿಎಸ್‍ಎನ್ ಪ್ರಸಾದ್ ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಬಾಳಿಲ ಗ್ರಾ.ಪಂ.ಸದಸ್ಯ ಯು.ರಾಧಾಕೃಷ್ಣ ರಾವ್,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಮೊದಲಾದವರಿದ್ದರು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

6 minutes ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

3 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

7 hours ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

7 hours ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

7 hours ago