Advertisement
ನಮ್ಮೂರ ಸುದ್ದಿ

ಶಾಸಕ ಅಂಗಾರ ಅವರಿಂದ ಮಾಡಾವು ವಿದ್ಯುತ್ ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ

Share

ಮಾಡಾವು :  ಮಾಡಾವು 110 ಕೆವಿ ವಿದ್ಯುತ್ ಸಬ್‍ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು ಸುಳ್ಯ ಶಾಸಕ ಎಸ್ ಅಂಗಾರ  ಶುಕ್ರವಾರ ಭೇಟಿ ನೀಡಿ ಕೆಪಿಟಿಸಿಎಲ್ ಅಧಿಕಾರಿಗಳಿಂದ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.

ಕೆಪಿಟಿಸಿಎಲ್ ಸುಪರಿಟೆಂಡಿಂಗ್ ಎಂಜಿನಿಯರ್ ರವಿಕಾಂತ್ ಕಾಮತ್ ಕಾಮಗಾರಿ ಕುರಿತಂತೆ ಮಾಹಿತಿ ನೀಡಿ ಆಗಸ್ಟ್ ವೇಳೆಗೆ  ಸಬ್‍ಸ್ಟೇಶನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ನೆಟ್ಲಮುಡ್ನೂರಿನಿಂದ ಕಬಕ ಮೂಲಕ ಮಾಡಾವಿಗೆ 110 ಕೆ ವಿ ವಿದ್ಯುತ್ ಸರಬರಾಜು ಮಾಡುವ ಯೋಜನೆ ಇದಾಗಿದ್ದು ಬೊಳಿಕಳದಲ್ಲಿ ಸುಮಾರು 4 ಎಕರೆ ಪ್ರದೇಶದಲ್ಲಿ ಸಬ್‍ಸ್ಟೇಷನ್ ನಿರ್ಮಾಣದ ಕಾಮಗಾರಿ  ಪ್ರಗತಿಯಲ್ಲಿದೆ.

ಶಾಸಕರು ಬೆಂಗಳೂರಿನಲ್ಲಿ ಕೆ.ಪಿ.ಟಿ.ಸಿ.ಎಲ್.  ಎಂ ಡಿ ಅವರನ್ನು ಕಳೆದ ವಾರ ಭೇಟಿಯಾಗಿದ್ದರು. ಕಾಮಗಾರಿಯನ್ನು ಶೀಘ್ರ ಪೂರೈಸಲು ಅಗತ್ಯವುಳ್ಳ ಎಲ್ಲಾ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಬ್ ಸ್ಟೇಷನ್ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮಳೆಗಾಲ ಆರಂಭಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಗಿದು, ಇದೇ ಆಗಸ್ಟ್ ವೇಳೆಗೆ ಬಿಟ್ಟುಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಲೈನ್ ಕೆಲಸದ ಬಗ್ಗೆ ಇರುವ ಅಡೆತಡೆ ನಿವಾರಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಅಂಗಾರ ತಿಳಿಸಿದರು.

ಕಾಮಗಾರಿ ಕುರಿತಂತೆ ಕೆಪಿಟಿಸಿಎಲ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಗಂಗಾಧರ,ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸತೀಶ್ , ಅಸಿಸ್ಟೆಂಟ್ ಎಂಜಿನಿಯರ್ ಬಸವರಾಜು,ಪ್ರಾಜೆಕ್ಟ್ ಎಂಜಿನಿಯರ್ ವಿಜೆಂದ್ರ ಮಾಹಿತಿ ನೀಡಿದರು.

ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುಳ್ಯ ಕಿಸಾನ್ ಸಂಘದ ಪ್ರಮುಖರಾದ ಪಿಜಿಎಸ್‍ಎನ್ ಪ್ರಸಾದ್ ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಬಾಳಿಲ ಗ್ರಾ.ಪಂ.ಸದಸ್ಯ ಯು.ರಾಧಾಕೃಷ್ಣ ರಾವ್,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಮೊದಲಾದವರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

3 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

4 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

7 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

16 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

17 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

23 hours ago