ಮಾಡಾವು : ಮಾಡಾವು 110 ಕೆವಿ ವಿದ್ಯುತ್ ಸಬ್ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು ಸುಳ್ಯ ಶಾಸಕ ಎಸ್ ಅಂಗಾರ ಶುಕ್ರವಾರ ಭೇಟಿ ನೀಡಿ ಕೆಪಿಟಿಸಿಎಲ್ ಅಧಿಕಾರಿಗಳಿಂದ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.
ಕೆಪಿಟಿಸಿಎಲ್ ಸುಪರಿಟೆಂಡಿಂಗ್ ಎಂಜಿನಿಯರ್ ರವಿಕಾಂತ್ ಕಾಮತ್ ಕಾಮಗಾರಿ ಕುರಿತಂತೆ ಮಾಹಿತಿ ನೀಡಿ ಆಗಸ್ಟ್ ವೇಳೆಗೆ ಸಬ್ಸ್ಟೇಶನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ನೆಟ್ಲಮುಡ್ನೂರಿನಿಂದ ಕಬಕ ಮೂಲಕ ಮಾಡಾವಿಗೆ 110 ಕೆ ವಿ ವಿದ್ಯುತ್ ಸರಬರಾಜು ಮಾಡುವ ಯೋಜನೆ ಇದಾಗಿದ್ದು ಬೊಳಿಕಳದಲ್ಲಿ ಸುಮಾರು 4 ಎಕರೆ ಪ್ರದೇಶದಲ್ಲಿ ಸಬ್ಸ್ಟೇಷನ್ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ.
ಶಾಸಕರು ಬೆಂಗಳೂರಿನಲ್ಲಿ ಕೆ.ಪಿ.ಟಿ.ಸಿ.ಎಲ್. ಎಂ ಡಿ ಅವರನ್ನು ಕಳೆದ ವಾರ ಭೇಟಿಯಾಗಿದ್ದರು. ಕಾಮಗಾರಿಯನ್ನು ಶೀಘ್ರ ಪೂರೈಸಲು ಅಗತ್ಯವುಳ್ಳ ಎಲ್ಲಾ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಬ್ ಸ್ಟೇಷನ್ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮಳೆಗಾಲ ಆರಂಭಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಗಿದು, ಇದೇ ಆಗಸ್ಟ್ ವೇಳೆಗೆ ಬಿಟ್ಟುಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಲೈನ್ ಕೆಲಸದ ಬಗ್ಗೆ ಇರುವ ಅಡೆತಡೆ ನಿವಾರಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಅಂಗಾರ ತಿಳಿಸಿದರು.
ಕಾಮಗಾರಿ ಕುರಿತಂತೆ ಕೆಪಿಟಿಸಿಎಲ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಗಂಗಾಧರ,ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸತೀಶ್ , ಅಸಿಸ್ಟೆಂಟ್ ಎಂಜಿನಿಯರ್ ಬಸವರಾಜು,ಪ್ರಾಜೆಕ್ಟ್ ಎಂಜಿನಿಯರ್ ವಿಜೆಂದ್ರ ಮಾಹಿತಿ ನೀಡಿದರು.
ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುಳ್ಯ ಕಿಸಾನ್ ಸಂಘದ ಪ್ರಮುಖರಾದ ಪಿಜಿಎಸ್ಎನ್ ಪ್ರಸಾದ್ ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಬಾಳಿಲ ಗ್ರಾ.ಪಂ.ಸದಸ್ಯ ಯು.ರಾಧಾಕೃಷ್ಣ ರಾವ್,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಮೊದಲಾದವರಿದ್ದರು.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…