ಮಾಡಾವು : ಮಾಡಾವು 110 ಕೆವಿ ವಿದ್ಯುತ್ ಸಬ್ಸ್ಟೇಷನ್ ಕಾಮಗಾರಿ ಪ್ರಗತಿಯಲ್ಲಿದ್ದು ಸುಳ್ಯ ಶಾಸಕ ಎಸ್ ಅಂಗಾರ ಶುಕ್ರವಾರ ಭೇಟಿ ನೀಡಿ ಕೆಪಿಟಿಸಿಎಲ್ ಅಧಿಕಾರಿಗಳಿಂದ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡರು.
ಕೆಪಿಟಿಸಿಎಲ್ ಸುಪರಿಟೆಂಡಿಂಗ್ ಎಂಜಿನಿಯರ್ ರವಿಕಾಂತ್ ಕಾಮತ್ ಕಾಮಗಾರಿ ಕುರಿತಂತೆ ಮಾಹಿತಿ ನೀಡಿ ಆಗಸ್ಟ್ ವೇಳೆಗೆ ಸಬ್ಸ್ಟೇಶನ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು. ನೆಟ್ಲಮುಡ್ನೂರಿನಿಂದ ಕಬಕ ಮೂಲಕ ಮಾಡಾವಿಗೆ 110 ಕೆ ವಿ ವಿದ್ಯುತ್ ಸರಬರಾಜು ಮಾಡುವ ಯೋಜನೆ ಇದಾಗಿದ್ದು ಬೊಳಿಕಳದಲ್ಲಿ ಸುಮಾರು 4 ಎಕರೆ ಪ್ರದೇಶದಲ್ಲಿ ಸಬ್ಸ್ಟೇಷನ್ ನಿರ್ಮಾಣದ ಕಾಮಗಾರಿ ಪ್ರಗತಿಯಲ್ಲಿದೆ.
ಶಾಸಕರು ಬೆಂಗಳೂರಿನಲ್ಲಿ ಕೆ.ಪಿ.ಟಿ.ಸಿ.ಎಲ್. ಎಂ ಡಿ ಅವರನ್ನು ಕಳೆದ ವಾರ ಭೇಟಿಯಾಗಿದ್ದರು. ಕಾಮಗಾರಿಯನ್ನು ಶೀಘ್ರ ಪೂರೈಸಲು ಅಗತ್ಯವುಳ್ಳ ಎಲ್ಲಾ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಬ್ ಸ್ಟೇಷನ್ ಕಾಮಗಾರಿ ಅಂತಿಮ ಹಂತದಲ್ಲಿದ್ದು ಮಳೆಗಾಲ ಆರಂಭಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಗಿದು, ಇದೇ ಆಗಸ್ಟ್ ವೇಳೆಗೆ ಬಿಟ್ಟುಕೊಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು. ಲೈನ್ ಕೆಲಸದ ಬಗ್ಗೆ ಇರುವ ಅಡೆತಡೆ ನಿವಾರಿಸಲು ವಿಶೇಷ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಅಂಗಾರ ತಿಳಿಸಿದರು.
ಕಾಮಗಾರಿ ಕುರಿತಂತೆ ಕೆಪಿಟಿಸಿಎಲ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಗಂಗಾಧರ,ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ ಸತೀಶ್ , ಅಸಿಸ್ಟೆಂಟ್ ಎಂಜಿನಿಯರ್ ಬಸವರಾಜು,ಪ್ರಾಜೆಕ್ಟ್ ಎಂಜಿನಿಯರ್ ವಿಜೆಂದ್ರ ಮಾಹಿತಿ ನೀಡಿದರು.
ಈ ಸಂದರ್ಭ ಜಿಲ್ಲಾ ಬಿಜೆಪಿ ಸದಸ್ಯ ರಾಕೇಶ್ ರೈ ಕೆಡೆಂಜಿ, ಸುಳ್ಯ ಕಿಸಾನ್ ಸಂಘದ ಪ್ರಮುಖರಾದ ಪಿಜಿಎಸ್ಎನ್ ಪ್ರಸಾದ್ ,ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ,ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಬಾಳಿಲ ಗ್ರಾ.ಪಂ.ಸದಸ್ಯ ಯು.ರಾಧಾಕೃಷ್ಣ ರಾವ್,ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ ಮೊದಲಾದವರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…