ಸುಳ್ಯ:ನಿಷ್ಕಳಂಕ ವ್ಯಕ್ತಿತ್ವದ ಹಾಗೂ 25 ವರ್ಷಗಳಿಂದ ಸುಳ್ಯ ಶಾಸಕರಾಗಿರುವ ಅಂಗಾರ ಅವರಿಗೆ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಸಿಗುವಂತಾಗಬೇಕು ಎಂದು ಮಂಡಲ ಮಾಜಿ ಅಧ್ಯಕ್ಷ , ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ತನ್ನ ಆಶಯ ವ್ಯಕ್ತಪಡಿಸಿದ್ದಾರೆ.
ಸುಳ್ಯ ಪತ್ರಕರ್ತರಿಗೆ ಪತ್ರಿಕಾ ಹೇಳಿಕೆ ನೀಡಿರುವ ವೆಂಕಟ್ ದಂಬೆಕೋಡಿ ಅವರು, ಜಿಲ್ಲೆಯಲ್ಲಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಳೆದ 25 ವರ್ಷಗಳಿಂದ ಶಾಸಕರಾಗಿರುವ ಅಂಗಾರ ಅವರು ಸಚ್ಚಾರಿತ್ರ್ಯದ ರಾಜಕಾರಣಿಯಾಗಿ , ಭ್ರಷ್ಟಾಚಾರ ಸೇರಿದಂತೆ ಯಾವುದೇ ಆರೋಪ ಇಲ್ಲದೆಯೇ ಕೆಲಸ ಮಾಡಿದ್ದಾರೆ. ಈ ಹಿಂದಿನ ವಿದ್ಯಮಾನ ಗಮನಿಸಿದರೆ ಒಂದು ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗುತ್ತದೆ, 25 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಂಗಾರ ಅವರಿಗೆ ಅರ್ಹವಾಗಿಯೇ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ವೆಂಕಟ್ ದಂಬೆಕೋಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…