ಸುಳ್ಯ:ನಿಷ್ಕಳಂಕ ವ್ಯಕ್ತಿತ್ವದ ಹಾಗೂ 25 ವರ್ಷಗಳಿಂದ ಸುಳ್ಯ ಶಾಸಕರಾಗಿರುವ ಅಂಗಾರ ಅವರಿಗೆ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಸಿಗುವಂತಾಗಬೇಕು ಎಂದು ಮಂಡಲ ಮಾಜಿ ಅಧ್ಯಕ್ಷ , ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ತನ್ನ ಆಶಯ ವ್ಯಕ್ತಪಡಿಸಿದ್ದಾರೆ.
ಸುಳ್ಯ ಪತ್ರಕರ್ತರಿಗೆ ಪತ್ರಿಕಾ ಹೇಳಿಕೆ ನೀಡಿರುವ ವೆಂಕಟ್ ದಂಬೆಕೋಡಿ ಅವರು, ಜಿಲ್ಲೆಯಲ್ಲಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಳೆದ 25 ವರ್ಷಗಳಿಂದ ಶಾಸಕರಾಗಿರುವ ಅಂಗಾರ ಅವರು ಸಚ್ಚಾರಿತ್ರ್ಯದ ರಾಜಕಾರಣಿಯಾಗಿ , ಭ್ರಷ್ಟಾಚಾರ ಸೇರಿದಂತೆ ಯಾವುದೇ ಆರೋಪ ಇಲ್ಲದೆಯೇ ಕೆಲಸ ಮಾಡಿದ್ದಾರೆ. ಈ ಹಿಂದಿನ ವಿದ್ಯಮಾನ ಗಮನಿಸಿದರೆ ಒಂದು ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗುತ್ತದೆ, 25 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಂಗಾರ ಅವರಿಗೆ ಅರ್ಹವಾಗಿಯೇ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ವೆಂಕಟ್ ದಂಬೆಕೋಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…