ಸುಳ್ಯ:ನಿಷ್ಕಳಂಕ ವ್ಯಕ್ತಿತ್ವದ ಹಾಗೂ 25 ವರ್ಷಗಳಿಂದ ಸುಳ್ಯ ಶಾಸಕರಾಗಿರುವ ಅಂಗಾರ ಅವರಿಗೆ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಸಿಗುವಂತಾಗಬೇಕು ಎಂದು ಮಂಡಲ ಮಾಜಿ ಅಧ್ಯಕ್ಷ , ಜಿಪಂ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ ತನ್ನ ಆಶಯ ವ್ಯಕ್ತಪಡಿಸಿದ್ದಾರೆ.
ಸುಳ್ಯ ಪತ್ರಕರ್ತರಿಗೆ ಪತ್ರಿಕಾ ಹೇಳಿಕೆ ನೀಡಿರುವ ವೆಂಕಟ್ ದಂಬೆಕೋಡಿ ಅವರು, ಜಿಲ್ಲೆಯಲ್ಲಿ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕೋ ಬೇಡವೋ ಎಂಬ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಳೆದ 25 ವರ್ಷಗಳಿಂದ ಶಾಸಕರಾಗಿರುವ ಅಂಗಾರ ಅವರು ಸಚ್ಚಾರಿತ್ರ್ಯದ ರಾಜಕಾರಣಿಯಾಗಿ , ಭ್ರಷ್ಟಾಚಾರ ಸೇರಿದಂತೆ ಯಾವುದೇ ಆರೋಪ ಇಲ್ಲದೆಯೇ ಕೆಲಸ ಮಾಡಿದ್ದಾರೆ. ಈ ಹಿಂದಿನ ವಿದ್ಯಮಾನ ಗಮನಿಸಿದರೆ ಒಂದು ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ಸಿಗುತ್ತದೆ, 25 ವರ್ಷಗಳಿಂದ ಸುಳ್ಯ ಕ್ಷೇತ್ರ ಪ್ರತಿನಿಧಿಸುತ್ತಿರುವ ಅಂಗಾರ ಅವರಿಗೆ ಅರ್ಹವಾಗಿಯೇ ಸಚಿವ ಸ್ಥಾನ ಸಿಗಬೇಕು ಎಂಬುದು ನನ್ನ ಆಶಯವಾಗಿದೆ ಎಂದು ವೆಂಕಟ್ ದಂಬೆಕೋಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…