Advertisement
ಯಕ್ಷಗಾನ : ಮಾತು-ಮಸೆತ

ಶಾಸ್ತ್ರದಲ್ಲಿ ಅನುಮಾನ, ಕರ್ಮಕಾಂಡದಲ್ಲಿ ಯಾರಿಗಾದರೂ ಜಿಜ್ಞಾಸೆ ಬಂದರೆ…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

Advertisement
Advertisement
Advertisement
Advertisement

(ಯಯಾತಿ ಮಹಾರಾಜನು ದೇವಯಾನಿಯನ್ನು ವಿವಾಹವಾಗಲು ಧರ್ಮಸೂಕ್ಷ್ಮದ ಪ್ರಶ್ನೆಯನ್ನು ಶುಕ್ರಾಚಾರ್ಯರ ಮುಂದಿಟ್ಟಾಗ)

Advertisement

“ಕುಮಾರ.. ನಾಲ್ಕು ವರ್ಣ ವಿಭಾಗ. ಇದು ಸಮಾಜದ ಸ್ವಾಸ್ಥ್ಯಕ್ಕೆ. ಕ್ಷತ್ರಿಯ ನೀನು. ನಾವು ಬ್ರಾಹ್ಮಣರು. ಸರ್ವೇಸಾಮಾನ್ಯವಾಗಿ ವೈದಿಕ ಪುತ್ರಿಯನ್ನು ಸಾಮಾನ್ಯ ಓರ್ವ ಕ್ಷತ್ರಿಯ ವಿವಾಹವಾಗಕೂಡದು. ವರ್ಣಸಂಕರ ಉಂಟಾಗುತ್ತದೆ. ರಾಜನು ಕ್ಷತ್ರಿಯನೇ ಅಂತ ಮುದ್ರೆ ಒತ್ತುವುದಕ್ಕೆ ಕಷ್ಟವಾಗುತ್ತದೆ. ಬ್ರಾಹ್ಮಣರಿಂದ ಮಂಗಳಸ್ನಾನವನ್ನು ಮಾಡಿಸಿಕೊಂಡು, ಕುಟುಂಬವನ್ನು ವಿಚ್ಛೇದಿಸಿಕೊಂಡು ಅಂತ ಹೇಳದಿದ್ರೂ ಕೇವಲ ಕೌಟುಂಬಿಕವಾದ ವ್ಯಕ್ತಿತ್ವವನ್ನು ಕಳೆದುಕೊಂಡು ರಾಜನು ಹೇಗಿರುತ್ತಾನೆ? ಆಚಾರ ಹೀಗುಂಟು. ಅಭಿಷೇಚನಗೊಂಡಂತಹ ಒಬ್ಬ ರಾಜ ಸೂತಕ ಪಾತಕಗಳಿಗಿಂತ ಹೊರಗಿರುತ್ತಾನೆ. ಪರಿಶುದ್ಧನಾಗಿರುತ್ತಾನೆ. ಆವಾಗ ಬ್ರಾಹ್ಮಣರು, ಇತರೇ ಜನಗಳು ಆ ರಾಜನಿಗೆ ನಾಲ್ಕು ವರ್ಣವನ್ನು ರಕ್ಷಿಸಿದ ಒಂದು ದಿವ್ಯತ್ವವನ್ನು ಆರೋಪಿಸುತ್ತಾರೆ.

ಅಶ್ವಮೇಧಕ್ಕೆ ಕುದುರೆಯನ್ನು ಪೂಜಿಸಿ ಕಳುಹಿಸುತ್ತೇವೆ. ಅದನ್ನು ‘ಕುದುರೆ’ ಅಂತ ಅಂಗೀಕರಿಸುವುದಕ್ಕೆ ಸಾಧ್ಯವಿಲ್ಲ ತಾನೆ? ಅಂತೆಯೇ ಅರಸುಗಳಿಗೆ ಎತ್ತಣದ ಜಾತಿ”? ಅರಸರ ಜಾತಿ ಅಂತಂದ್ರೆ ಅರಸರದ್ದೇ. ರೂಢಿಯಿದೆ, ಸಂದರ್ಭ ಬಂದಾಗ ಕ್ಷತ್ರಿಯನಾದವನು ಬ್ರಾಹ್ಮಣ ವಧುವನ್ನು ಕೈ ಹಿಡಿಯಬಹುದು. ಬ್ರಾಹ್ಮಣರಂತೂ ಕ್ಷತ್ರಿಯರಲ್ಲಿ ಅರಸು ಮಕ್ಕಳನ್ನು ಸೃಷ್ಟಿಸುವುದು ಇದ್ದೇ ಇದೆ. ಆ ಅನುಲೋಮ, ಪ್ರತಿಲೋಮ ಪದ್ಧತಿ ಬಹಳ ಹಿಂದಿನಿಂದ ನಡೆದುಕೊಂಡು ಬಂದಿದೆ. ಆದರೆ ಅಪೂರ್ವ, ಅಪರೂಪ.

Advertisement

ವಿಪ್ರರಾದಂತಹ ನಮಗೆ ಹೇಗೆ ಗರ್ಭಾದಿ ಕೊನೆಯ ಹಂತದವರೆಗೆ ಸಂಸ್ಕಾರಗಳಿವೆಯೋ ಹಾಗೆ ಕ್ಷತ್ರಿಯರಾದ ನಿಮಗೂ ಇದೆ. ಉಪನೀತನಾದವನು ಗೃಹಸ್ಥಾಶ್ರಮ ಸ್ವೀಕಾರ ಮಾಡುವಾಗ ಅವನು ಔಪಾಸನೆ ಮಾಡಬೇಕಾಗುತ್ತದೆ. ಇಷ್ಟನ್ನು ಮುಂದಿಟ್ಟುಕೊಂಡು ಕ್ಷತ್ರಿಯ ಜಾತಿಯಲ್ಲಿ ಹುಟ್ಟಿದರೂ ಈಗ ಜಾತ್ಯತೀತನಾಗಿ ಇರುವುದರಿಂದ, ಒಂದು ರೀತಿಯ ದೈವೀ ಆವೇಶ ನಿನ್ನಲ್ಲಿ ಉಂಟು ಅಂತ ಕಂಡುಕೊಂಡ ಈ ಶುಕ್ರಾಚಾರ್ಯ, ವಿದ್ಯುಕ್ತವಾಗಿ ನನ್ನ ಮಗಳನ್ನು ಧಾರೆ ಎರೆದು ಕೊಡುವುದಕ್ಕೆ ಸಿದ್ಧನಾಗಿದ್ದಾನೆ. ಇದನ್ನು ಯಾರಾದರೂ ಆಕ್ಷೇಪಿಸುವ ಸಾಧಾರಣ ಬ್ರಾಹ್ಮಣರು ಇದ್ದರೆ, ಯಾರವರು? ಶಾಸ್ತ್ರದಲ್ಲಿ ಅನುಮಾನ ಬಂದರೆ, ಕರ್ಮಕಾಂಡದಲ್ಲಿ ಯಾರಿಗಾದರೂ ಜಿಜ್ಞಾಸೆ ಬಂದರೆ, ಕೊನೆಯ ತೀರ್ಮಾನ ಹೇಳುವವನು ನಾನೇ…”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ

Published by
ನಾ.ಕಾರಂತ ಪೆರಾಜೆ

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

2 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

3 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

3 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago