Advertisement
ಯಕ್ಷಗಾನ : ಮಾತು-ಮಸೆತ

ಶಾಸ್ತ್ರದಲ್ಲಿ ಅನುಮಾನ, ಕರ್ಮಕಾಂಡದಲ್ಲಿ ಯಾರಿಗಾದರೂ ಜಿಜ್ಞಾಸೆ ಬಂದರೆ…….

Share

ಹರಿದಾಸ್ ಶೇಣಿ ಗೋಪಾಲಕೃಷ್ಣ ಭಟ್ಟರ ‘ಶುಕ್ರಾಚಾರ್ಯ’ ’
ಪ್ರಸಂಗ : ಮೃತಸಂಜೀವಿನಿ

(ಯಯಾತಿ ಮಹಾರಾಜನು ದೇವಯಾನಿಯನ್ನು ವಿವಾಹವಾಗಲು ಧರ್ಮಸೂಕ್ಷ್ಮದ ಪ್ರಶ್ನೆಯನ್ನು ಶುಕ್ರಾಚಾರ್ಯರ ಮುಂದಿಟ್ಟಾಗ)

“ಕುಮಾರ.. ನಾಲ್ಕು ವರ್ಣ ವಿಭಾಗ. ಇದು ಸಮಾಜದ ಸ್ವಾಸ್ಥ್ಯಕ್ಕೆ. ಕ್ಷತ್ರಿಯ ನೀನು. ನಾವು ಬ್ರಾಹ್ಮಣರು. ಸರ್ವೇಸಾಮಾನ್ಯವಾಗಿ ವೈದಿಕ ಪುತ್ರಿಯನ್ನು ಸಾಮಾನ್ಯ ಓರ್ವ ಕ್ಷತ್ರಿಯ ವಿವಾಹವಾಗಕೂಡದು. ವರ್ಣಸಂಕರ ಉಂಟಾಗುತ್ತದೆ. ರಾಜನು ಕ್ಷತ್ರಿಯನೇ ಅಂತ ಮುದ್ರೆ ಒತ್ತುವುದಕ್ಕೆ ಕಷ್ಟವಾಗುತ್ತದೆ. ಬ್ರಾಹ್ಮಣರಿಂದ ಮಂಗಳಸ್ನಾನವನ್ನು ಮಾಡಿಸಿಕೊಂಡು, ಕುಟುಂಬವನ್ನು ವಿಚ್ಛೇದಿಸಿಕೊಂಡು ಅಂತ ಹೇಳದಿದ್ರೂ ಕೇವಲ ಕೌಟುಂಬಿಕವಾದ ವ್ಯಕ್ತಿತ್ವವನ್ನು ಕಳೆದುಕೊಂಡು ರಾಜನು ಹೇಗಿರುತ್ತಾನೆ? ಆಚಾರ ಹೀಗುಂಟು. ಅಭಿಷೇಚನಗೊಂಡಂತಹ ಒಬ್ಬ ರಾಜ ಸೂತಕ ಪಾತಕಗಳಿಗಿಂತ ಹೊರಗಿರುತ್ತಾನೆ. ಪರಿಶುದ್ಧನಾಗಿರುತ್ತಾನೆ. ಆವಾಗ ಬ್ರಾಹ್ಮಣರು, ಇತರೇ ಜನಗಳು ಆ ರಾಜನಿಗೆ ನಾಲ್ಕು ವರ್ಣವನ್ನು ರಕ್ಷಿಸಿದ ಒಂದು ದಿವ್ಯತ್ವವನ್ನು ಆರೋಪಿಸುತ್ತಾರೆ.

ಅಶ್ವಮೇಧಕ್ಕೆ ಕುದುರೆಯನ್ನು ಪೂಜಿಸಿ ಕಳುಹಿಸುತ್ತೇವೆ. ಅದನ್ನು ‘ಕುದುರೆ’ ಅಂತ ಅಂಗೀಕರಿಸುವುದಕ್ಕೆ ಸಾಧ್ಯವಿಲ್ಲ ತಾನೆ? ಅಂತೆಯೇ ಅರಸುಗಳಿಗೆ ಎತ್ತಣದ ಜಾತಿ”? ಅರಸರ ಜಾತಿ ಅಂತಂದ್ರೆ ಅರಸರದ್ದೇ. ರೂಢಿಯಿದೆ, ಸಂದರ್ಭ ಬಂದಾಗ ಕ್ಷತ್ರಿಯನಾದವನು ಬ್ರಾಹ್ಮಣ ವಧುವನ್ನು ಕೈ ಹಿಡಿಯಬಹುದು. ಬ್ರಾಹ್ಮಣರಂತೂ ಕ್ಷತ್ರಿಯರಲ್ಲಿ ಅರಸು ಮಕ್ಕಳನ್ನು ಸೃಷ್ಟಿಸುವುದು ಇದ್ದೇ ಇದೆ. ಆ ಅನುಲೋಮ, ಪ್ರತಿಲೋಮ ಪದ್ಧತಿ ಬಹಳ ಹಿಂದಿನಿಂದ ನಡೆದುಕೊಂಡು ಬಂದಿದೆ. ಆದರೆ ಅಪೂರ್ವ, ಅಪರೂಪ.

ವಿಪ್ರರಾದಂತಹ ನಮಗೆ ಹೇಗೆ ಗರ್ಭಾದಿ ಕೊನೆಯ ಹಂತದವರೆಗೆ ಸಂಸ್ಕಾರಗಳಿವೆಯೋ ಹಾಗೆ ಕ್ಷತ್ರಿಯರಾದ ನಿಮಗೂ ಇದೆ. ಉಪನೀತನಾದವನು ಗೃಹಸ್ಥಾಶ್ರಮ ಸ್ವೀಕಾರ ಮಾಡುವಾಗ ಅವನು ಔಪಾಸನೆ ಮಾಡಬೇಕಾಗುತ್ತದೆ. ಇಷ್ಟನ್ನು ಮುಂದಿಟ್ಟುಕೊಂಡು ಕ್ಷತ್ರಿಯ ಜಾತಿಯಲ್ಲಿ ಹುಟ್ಟಿದರೂ ಈಗ ಜಾತ್ಯತೀತನಾಗಿ ಇರುವುದರಿಂದ, ಒಂದು ರೀತಿಯ ದೈವೀ ಆವೇಶ ನಿನ್ನಲ್ಲಿ ಉಂಟು ಅಂತ ಕಂಡುಕೊಂಡ ಈ ಶುಕ್ರಾಚಾರ್ಯ, ವಿದ್ಯುಕ್ತವಾಗಿ ನನ್ನ ಮಗಳನ್ನು ಧಾರೆ ಎರೆದು ಕೊಡುವುದಕ್ಕೆ ಸಿದ್ಧನಾಗಿದ್ದಾನೆ. ಇದನ್ನು ಯಾರಾದರೂ ಆಕ್ಷೇಪಿಸುವ ಸಾಧಾರಣ ಬ್ರಾಹ್ಮಣರು ಇದ್ದರೆ, ಯಾರವರು? ಶಾಸ್ತ್ರದಲ್ಲಿ ಅನುಮಾನ ಬಂದರೆ, ಕರ್ಮಕಾಂಡದಲ್ಲಿ ಯಾರಿಗಾದರೂ ಜಿಜ್ಞಾಸೆ ಬಂದರೆ, ಕೊನೆಯ ತೀರ್ಮಾನ ಹೇಳುವವನು ನಾನೇ…”

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ನಾ.ಕಾರಂತ ಪೆರಾಜೆ

ಪತ್ರಕರ್ತ , ಕಲಾವಿದ , ಅಂಕಣಕಾರ ನಾ.ಕಾರಂತ ಪೆರಾಜೆ ಅವರು ಪ್ರಸ್ತುತ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಕರ್ತರಾಗಿ, ಕಲಾವಿದರಾಗಿ, ಅಂಕಣಕಾರರಾಗಿ ಗುರುತಿಸಿಕೊಂಡಿರುವ ನಾ.ಕಾರಂತ ಅವರು ತಾಳಮದ್ದಳೆಯಲ್ಲಿ ಅರ್ಥದಾರಿಯಾಗಿ ಹಾಗೂ ವಿವಿಧ ಮೇಳಗಳಲ್ಲಿ ವೇಷಧಾರಿಯೂ ಆಗಿ ಕಾರ್ಯ ನಿರ್ವಹಿಸಿದ್ದಾರೆ. ಪುತ್ತೂರು ತಾಲೂಕಿನ 17ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

Published by
ನಾ.ಕಾರಂತ ಪೆರಾಜೆ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

6 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

8 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

9 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

10 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

22 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago