ಬದಿಯಡ್ಕ: ಶಾಸ್ತ್ರಿ ಸಾಹಿತ್ಯ ಪದವಿ ಪರೀಕ್ಷೆಯಲ್ಲಿ ಸ್ವರ್ಣಪದಕವನ್ನು ಗಳಿಸುವುದರ ಮೂಲಕ ವಿಶೇಷ ಸಾಧನೆಗೈದ ನೀರ್ಚಾಲು ಪಾಂಡೇಲು ಶರಣ್ಯ ಅವರನ್ನು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಪ್ರತಿಭಾಪುರಸ್ಕಾರವನ್ನು ನೀಡಿ ಆಶೀರ್ವದಿಸಿದರು. ತನ್ನ ಸ್ವರ್ಣಪದಕವನ್ನು ಶ್ರೀಪೀಠಕ್ಕೆ ಸಮರ್ಪಿಸಿ ಧಾರಣೆಮಾಡಿಸಿಕೊಂಡ ಶರಣ್ಯ ನೀರ್ಚಾಲು ಸಮೀಪದ ಬೇಳ ವಿಷ್ಣುಮೂರ್ತಿ ನಗರದಲ್ಲಿರುವ ಪಾಂಡೇಲು ವೇದಮೂರ್ತಿ ಕುಮಾರಸ್ವಾಮಿ ಪಿ.ಎಸ್. ಮತ್ತು ನಳಿನಿ ದಂಪತಿಗಳ ಪುತ್ರ. ಶೃಂಗೇರಿ ರಾಜೀವಗಾಂ ಕ್ಯಾಂಪಸ್ನಲ್ಲಿ ರಾಷ್ಟ್ರೀಯ ಸಂಸ್ಕೃತ ಸಂಸ್ಥಾನದಲ್ಲಿ ಅಲಂಕಾರ ಶಾಸ್ತ್ರದಲ್ಲಿ ಮುಂದಿನ ವಿದ್ಯಾಭ್ಯಾಸವನ್ನು ಕೈಗೊಳ್ಳುತ್ತಿದ್ದಾರೆ.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…