ಸುಬ್ರಹ್ಮಣ್ಯ :ಯಾಂತ್ರಿಕ ಜೀವನದ ಇಂದಿನ ದಿನಗಳಲ್ಲಿ ಕಲೆಗೆ ಪ್ರೋತ್ಸಾಹ ಅಗತ್ಯ. ಸಂಸ್ಕೃತಿ , ಕಲೆ ಉಳಿಯಲು ದೇವಸ್ಥಾನದ ಕಡೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು
ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ನಡೆದ ಶ್ರೀ ಸರಸ್ವತೀ ಸಂಗೀತ ಶಾಲೆ ಸುಬ್ರಹ್ಮಣ್ಯ ಇದರ ವತಿಯಿಂದ ನಡೆದ ಮೂರು ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆ.ವಿ.ಜಿ ಶಿಕ್ಷಣ ಸಂಸ್ಥೆಯ ತಾಂತ್ರಿಕ ವಿಭಾಗದ ಉಪಪ್ರಾಂಶುಪಾಲ ಪ್ರೊ ಡಾ.ಶಿವಕುಮಾರ್ ಹೊಸೋಳಿಕೆ ಮಾತನಾಡಿ, “ಸಂಗೀತದಲ್ಲಿ ಹಲವು ಪ್ರಕಾರಗಳಿದ್ದರೂ ಕರ್ನಾಟಕ ಶಾಸ್ತ್ರೀಯ ಕಲಿಕೆಯಿಂದ ಬಹಳಷ್ಟು ಮನಸ್ಸಿಗೆ ಸಂತ್ರಪ್ತಿ ಸಿಗುತ್ತದೆ ಎಂದರು.
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ವೇದವ್ಯಾಸ , ವಿದುಷಿ ಕಾಂಚನ ಎಸ್ ಶ್ರುತಿರಂಜನಿ, ಸಂಗೀತ ಶಿಕ್ಷಕಿ ವಿದ್ಯಾಗೋವಿಂದ, ಕೆಎಸ್ಎಸ್ ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಭಟ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಸಂಗೀತ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು, ಸಂಗೀತ ಅಭಿಮಾನಿಗಳು ಉಪಸ್ಥಿತರಿದ್ದರು.
ವಿನೂಪ್ ಮಲ್ಲಾರ ಸ್ವಾಗತಿಸಿದರು. ಶಿಕ್ಷಕ ಕೃಷ್ಣ ಭಟ್ ವಂದಿಸಿದರು. ಹರೀಶ್ ಬೆದ್ರಾಜೆ ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…