ಸುಬ್ರಹ್ಮಣ್ಯ :ಯಾಂತ್ರಿಕ ಜೀವನದ ಇಂದಿನ ದಿನಗಳಲ್ಲಿ ಕಲೆಗೆ ಪ್ರೋತ್ಸಾಹ ಅಗತ್ಯ. ಸಂಸ್ಕೃತಿ , ಕಲೆ ಉಳಿಯಲು ದೇವಸ್ಥಾನದ ಕಡೆಯಿಂದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಹೇಳಿದರು
ಸುಬ್ರಹ್ಮಣ್ಯ ಕೆಎಸ್ಎಸ್ ಕಾಲೇಜಿನಲ್ಲಿ ನಡೆದ ಶ್ರೀ ಸರಸ್ವತೀ ಸಂಗೀತ ಶಾಲೆ ಸುಬ್ರಹ್ಮಣ್ಯ ಇದರ ವತಿಯಿಂದ ನಡೆದ ಮೂರು ದಿನಗಳ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೆ.ವಿ.ಜಿ ಶಿಕ್ಷಣ ಸಂಸ್ಥೆಯ ತಾಂತ್ರಿಕ ವಿಭಾಗದ ಉಪಪ್ರಾಂಶುಪಾಲ ಪ್ರೊ ಡಾ.ಶಿವಕುಮಾರ್ ಹೊಸೋಳಿಕೆ ಮಾತನಾಡಿ, “ಸಂಗೀತದಲ್ಲಿ ಹಲವು ಪ್ರಕಾರಗಳಿದ್ದರೂ ಕರ್ನಾಟಕ ಶಾಸ್ತ್ರೀಯ ಕಲಿಕೆಯಿಂದ ಬಹಳಷ್ಟು ಮನಸ್ಸಿಗೆ ಸಂತ್ರಪ್ತಿ ಸಿಗುತ್ತದೆ ಎಂದರು.
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ವೇದವ್ಯಾಸ , ವಿದುಷಿ ಕಾಂಚನ ಎಸ್ ಶ್ರುತಿರಂಜನಿ, ಸಂಗೀತ ಶಿಕ್ಷಕಿ ವಿದ್ಯಾಗೋವಿಂದ, ಕೆಎಸ್ಎಸ್ ಕಾಲೇಜು ಪ್ರಾಂಶುಪಾಲ ಪ್ರೋ ಉದಯಕುಮಾರ್ ಭಟ್, ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಅಧ್ಯಕ್ಷ ಗಣೇಶ್ ಪ್ರಸಾದ್, ಸಂಗೀತ ವಿದ್ಯಾರ್ಥಿಗಳ ಪೋಷಕರು, ವಿದ್ಯಾರ್ಥಿಗಳು, ಸಂಗೀತ ಅಭಿಮಾನಿಗಳು ಉಪಸ್ಥಿತರಿದ್ದರು.
ವಿನೂಪ್ ಮಲ್ಲಾರ ಸ್ವಾಗತಿಸಿದರು. ಶಿಕ್ಷಕ ಕೃಷ್ಣ ಭಟ್ ವಂದಿಸಿದರು. ಹರೀಶ್ ಬೆದ್ರಾಜೆ ಕಾರ್ಯಕ್ರಮ ನಿರೂಪಿಸಿದರು.
ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…