ಸಾಹಿತ್ಯ

ಶಿಕ್ಷಕಿ‌ ಪ್ರಮೀಳಾರಾಜ್‌ ಗೆ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಪ್ರಶಸ್ತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.) ಬೆಳಗಾವಿ, ಇದರ ವತಿಯಿಂದ ಕೊಡಮಾಡುವ ಈ ಬಾರಿಯ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಗೌರವ ಪುರಸ್ಕಾರಕ್ಕೆ ನಿಡುಬೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾರಾಜ್ ಆಯ್ಕೆಯಾಗಿರುತ್ತಾರೆ.

Advertisement
Advertisement

ಸಾಹಿತ್ಯ ‌ಕ್ಷೇತ್ರದ ಹದಿನೈದು ಮಂದಿ ಸಾಧಕರ ಪ್ರಕಟಗೊಂಡ ಕೃತಿಗಳನ್ನು ಆರಿಸಿ ಈ ಗೌರವ ಪುರಸ್ಕಾರ ನೀಡಲಾಗುತ್ತಿದ್ದು, ಕವಯತ್ರಿ ಪ್ರಮಿಳಾರಾಜ್ ಅವರ ‘ಸಂಗೀತಾ – ನನ್ನೆದೆಯ ಭಾವಗಳ ಯಾನ’ ಕವನ ಸಂಕಲನವು ಈ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ. ಕಳೆದ ವರ್ಷ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ನಡೆಸಲಾದ ಶಿಕ್ಷಕರ ಕವಿಗೋಷ್ಠಿಯ ದಿನ ಈ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಗಿದ್ದು, ಭಾವಪೂರ್ಣ ಪದಪುಂಜಗಳ ಮೂಲಕ ಬದುಕು-ಬವಣೆ, ನೋವು-ನಲಿವುಗಳ ವಾಸ್ತವ ಚಿತ್ರಣವನ್ನು ತೆರೆದಿಡುವ ಈ ಕೃತಿಯು ಸಾಹಿತ್ಯ ಪ್ರಿಯರ ಮೆಚ್ಚುಗೆ ಗಳಿಸಿತ್ತು.

ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಅರ್ಹತೆ ಗಳಿಸಿದ ತನ್ನ ಚೊಚ್ಚಲ ಕವನ ಸಂಕಲನದ ಕುರಿತಾಗಿ ಹೆಮ್ಮೆ ಪಡುತ್ತಿರುವ ಕವಯತ್ರಿ, ತನ್ನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡಿದ ಗುರುಗಳು, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಭಿಮಾನದಿಂದ ಸ್ಮರಿಸಿಕೊಳ್ಳುತ್ತಿದ್ದಾರೆ.

ಜುಲೈ 7 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಈ ಪುರಸ್ಕಾರ ಪಡೆಯಲಿರುವ ಪ್ರಮೀಳಾರಾಜ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಜ್ ಅವರ ಧರ್ಮಪತ್ನಿ ಹಾಗೂ ಬಂಟ್ವಾಳದ ಆಲದಪದವು ದಿ‌. ಶೀನ ಮತ್ತು  ಲಲಿತ ದಂಪತಿಗಳ ಸುಪುತ್ರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳೆ ವಿಮೆಗೆ ನೋಂದಾಯಿಸಲು ರೈತರಿಗೆ ಕೃಷಿ ಇಲಾಖೆ ಸೂಚನೆ | ಭತ್ತ ಬೆಳೆಯುವವರಿಗೆ ವಿಶೇಷ ಗಮನ |

2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ…

13 minutes ago

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ

ದೇಸೀ ಗೋತಳಿ ಸಂರಕ್ಷಣೆಗೆ ಗ್ರಾಮೀಣ ಪ್ರದೇಶ, ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯವಿದೆ. ದನ…

10 hours ago

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ

ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವ ಹೆಚ್ಚಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದ್ದು, ಮಹಿಳಾ ನೇತೃತ್ವದ…

12 hours ago

ಹಾವೇರಿ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಳ

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಹಾಗೂ ಮುಂಗಾರು ಮಳೆ ಉತ್ತಮ ರೀತಿಯಲ್ಲಿ ಸುರಿಯುತ್ತಿದ್ದು,…

12 hours ago

ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ…

12 hours ago