Advertisement
ಸಾಹಿತ್ಯ

ಶಿಕ್ಷಕಿ‌ ಪ್ರಮೀಳಾರಾಜ್‌ ಗೆ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಪ್ರಶಸ್ತಿ

Share

ಸುಳ್ಯ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.) ಬೆಳಗಾವಿ, ಇದರ ವತಿಯಿಂದ ಕೊಡಮಾಡುವ ಈ ಬಾರಿಯ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಗೌರವ ಪುರಸ್ಕಾರಕ್ಕೆ ನಿಡುಬೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾರಾಜ್ ಆಯ್ಕೆಯಾಗಿರುತ್ತಾರೆ.

ಸಾಹಿತ್ಯ ‌ಕ್ಷೇತ್ರದ ಹದಿನೈದು ಮಂದಿ ಸಾಧಕರ ಪ್ರಕಟಗೊಂಡ ಕೃತಿಗಳನ್ನು ಆರಿಸಿ ಈ ಗೌರವ ಪುರಸ್ಕಾರ ನೀಡಲಾಗುತ್ತಿದ್ದು, ಕವಯತ್ರಿ ಪ್ರಮಿಳಾರಾಜ್ ಅವರ ‘ಸಂಗೀತಾ – ನನ್ನೆದೆಯ ಭಾವಗಳ ಯಾನ’ ಕವನ ಸಂಕಲನವು ಈ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ. ಕಳೆದ ವರ್ಷ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ನಡೆಸಲಾದ ಶಿಕ್ಷಕರ ಕವಿಗೋಷ್ಠಿಯ ದಿನ ಈ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಗಿದ್ದು, ಭಾವಪೂರ್ಣ ಪದಪುಂಜಗಳ ಮೂಲಕ ಬದುಕು-ಬವಣೆ, ನೋವು-ನಲಿವುಗಳ ವಾಸ್ತವ ಚಿತ್ರಣವನ್ನು ತೆರೆದಿಡುವ ಈ ಕೃತಿಯು ಸಾಹಿತ್ಯ ಪ್ರಿಯರ ಮೆಚ್ಚುಗೆ ಗಳಿಸಿತ್ತು.

ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಅರ್ಹತೆ ಗಳಿಸಿದ ತನ್ನ ಚೊಚ್ಚಲ ಕವನ ಸಂಕಲನದ ಕುರಿತಾಗಿ ಹೆಮ್ಮೆ ಪಡುತ್ತಿರುವ ಕವಯತ್ರಿ, ತನ್ನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡಿದ ಗುರುಗಳು, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಭಿಮಾನದಿಂದ ಸ್ಮರಿಸಿಕೊಳ್ಳುತ್ತಿದ್ದಾರೆ.

ಜುಲೈ 7 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಈ ಪುರಸ್ಕಾರ ಪಡೆಯಲಿರುವ ಪ್ರಮೀಳಾರಾಜ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಜ್ ಅವರ ಧರ್ಮಪತ್ನಿ ಹಾಗೂ ಬಂಟ್ವಾಳದ ಆಲದಪದವು ದಿ‌. ಶೀನ ಮತ್ತು  ಲಲಿತ ದಂಪತಿಗಳ ಸುಪುತ್ರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

11 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

18 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago