ಸುಳ್ಯ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.) ಬೆಳಗಾವಿ, ಇದರ ವತಿಯಿಂದ ಕೊಡಮಾಡುವ ಈ ಬಾರಿಯ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಗೌರವ ಪುರಸ್ಕಾರಕ್ಕೆ ನಿಡುಬೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾರಾಜ್ ಆಯ್ಕೆಯಾಗಿರುತ್ತಾರೆ.
ಸಾಹಿತ್ಯ ಕ್ಷೇತ್ರದ ಹದಿನೈದು ಮಂದಿ ಸಾಧಕರ ಪ್ರಕಟಗೊಂಡ ಕೃತಿಗಳನ್ನು ಆರಿಸಿ ಈ ಗೌರವ ಪುರಸ್ಕಾರ ನೀಡಲಾಗುತ್ತಿದ್ದು, ಕವಯತ್ರಿ ಪ್ರಮಿಳಾರಾಜ್ ಅವರ ‘ಸಂಗೀತಾ – ನನ್ನೆದೆಯ ಭಾವಗಳ ಯಾನ’ ಕವನ ಸಂಕಲನವು ಈ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ. ಕಳೆದ ವರ್ಷ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ನಡೆಸಲಾದ ಶಿಕ್ಷಕರ ಕವಿಗೋಷ್ಠಿಯ ದಿನ ಈ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಗಿದ್ದು, ಭಾವಪೂರ್ಣ ಪದಪುಂಜಗಳ ಮೂಲಕ ಬದುಕು-ಬವಣೆ, ನೋವು-ನಲಿವುಗಳ ವಾಸ್ತವ ಚಿತ್ರಣವನ್ನು ತೆರೆದಿಡುವ ಈ ಕೃತಿಯು ಸಾಹಿತ್ಯ ಪ್ರಿಯರ ಮೆಚ್ಚುಗೆ ಗಳಿಸಿತ್ತು.
ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಅರ್ಹತೆ ಗಳಿಸಿದ ತನ್ನ ಚೊಚ್ಚಲ ಕವನ ಸಂಕಲನದ ಕುರಿತಾಗಿ ಹೆಮ್ಮೆ ಪಡುತ್ತಿರುವ ಕವಯತ್ರಿ, ತನ್ನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡಿದ ಗುರುಗಳು, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಭಿಮಾನದಿಂದ ಸ್ಮರಿಸಿಕೊಳ್ಳುತ್ತಿದ್ದಾರೆ.
ಜುಲೈ 7 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಈ ಪುರಸ್ಕಾರ ಪಡೆಯಲಿರುವ ಪ್ರಮೀಳಾರಾಜ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಜ್ ಅವರ ಧರ್ಮಪತ್ನಿ ಹಾಗೂ ಬಂಟ್ವಾಳದ ಆಲದಪದವು ದಿ. ಶೀನ ಮತ್ತು ಲಲಿತ ದಂಪತಿಗಳ ಸುಪುತ್ರಿ.
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…