Advertisement
ಸಾಹಿತ್ಯ

ಶಿಕ್ಷಕಿ‌ ಪ್ರಮೀಳಾರಾಜ್‌ ಗೆ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಪ್ರಶಸ್ತಿ

Share

ಸುಳ್ಯ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.) ಬೆಳಗಾವಿ, ಇದರ ವತಿಯಿಂದ ಕೊಡಮಾಡುವ ಈ ಬಾರಿಯ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಗೌರವ ಪುರಸ್ಕಾರಕ್ಕೆ ನಿಡುಬೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾರಾಜ್ ಆಯ್ಕೆಯಾಗಿರುತ್ತಾರೆ.

Advertisement
Advertisement

ಸಾಹಿತ್ಯ ‌ಕ್ಷೇತ್ರದ ಹದಿನೈದು ಮಂದಿ ಸಾಧಕರ ಪ್ರಕಟಗೊಂಡ ಕೃತಿಗಳನ್ನು ಆರಿಸಿ ಈ ಗೌರವ ಪುರಸ್ಕಾರ ನೀಡಲಾಗುತ್ತಿದ್ದು, ಕವಯತ್ರಿ ಪ್ರಮಿಳಾರಾಜ್ ಅವರ ‘ಸಂಗೀತಾ – ನನ್ನೆದೆಯ ಭಾವಗಳ ಯಾನ’ ಕವನ ಸಂಕಲನವು ಈ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ. ಕಳೆದ ವರ್ಷ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ನಡೆಸಲಾದ ಶಿಕ್ಷಕರ ಕವಿಗೋಷ್ಠಿಯ ದಿನ ಈ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಗಿದ್ದು, ಭಾವಪೂರ್ಣ ಪದಪುಂಜಗಳ ಮೂಲಕ ಬದುಕು-ಬವಣೆ, ನೋವು-ನಲಿವುಗಳ ವಾಸ್ತವ ಚಿತ್ರಣವನ್ನು ತೆರೆದಿಡುವ ಈ ಕೃತಿಯು ಸಾಹಿತ್ಯ ಪ್ರಿಯರ ಮೆಚ್ಚುಗೆ ಗಳಿಸಿತ್ತು.

Advertisement

ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಅರ್ಹತೆ ಗಳಿಸಿದ ತನ್ನ ಚೊಚ್ಚಲ ಕವನ ಸಂಕಲನದ ಕುರಿತಾಗಿ ಹೆಮ್ಮೆ ಪಡುತ್ತಿರುವ ಕವಯತ್ರಿ, ತನ್ನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡಿದ ಗುರುಗಳು, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಭಿಮಾನದಿಂದ ಸ್ಮರಿಸಿಕೊಳ್ಳುತ್ತಿದ್ದಾರೆ.

ಜುಲೈ 7 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಈ ಪುರಸ್ಕಾರ ಪಡೆಯಲಿರುವ ಪ್ರಮೀಳಾರಾಜ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಜ್ ಅವರ ಧರ್ಮಪತ್ನಿ ಹಾಗೂ ಬಂಟ್ವಾಳದ ಆಲದಪದವು ದಿ‌. ಶೀನ ಮತ್ತು  ಲಲಿತ ದಂಪತಿಗಳ ಸುಪುತ್ರಿ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

9 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

10 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

17 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

18 hours ago