Advertisement
ಸಾಹಿತ್ಯ

ಶಿಕ್ಷಕಿ‌ ಪ್ರಮೀಳಾರಾಜ್‌ ಗೆ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಪ್ರಶಸ್ತಿ

Share

ಸುಳ್ಯ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.) ಬೆಳಗಾವಿ, ಇದರ ವತಿಯಿಂದ ಕೊಡಮಾಡುವ ಈ ಬಾರಿಯ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಗೌರವ ಪುರಸ್ಕಾರಕ್ಕೆ ನಿಡುಬೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾರಾಜ್ ಆಯ್ಕೆಯಾಗಿರುತ್ತಾರೆ.

ಸಾಹಿತ್ಯ ‌ಕ್ಷೇತ್ರದ ಹದಿನೈದು ಮಂದಿ ಸಾಧಕರ ಪ್ರಕಟಗೊಂಡ ಕೃತಿಗಳನ್ನು ಆರಿಸಿ ಈ ಗೌರವ ಪುರಸ್ಕಾರ ನೀಡಲಾಗುತ್ತಿದ್ದು, ಕವಯತ್ರಿ ಪ್ರಮಿಳಾರಾಜ್ ಅವರ ‘ಸಂಗೀತಾ – ನನ್ನೆದೆಯ ಭಾವಗಳ ಯಾನ’ ಕವನ ಸಂಕಲನವು ಈ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ. ಕಳೆದ ವರ್ಷ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ನಡೆಸಲಾದ ಶಿಕ್ಷಕರ ಕವಿಗೋಷ್ಠಿಯ ದಿನ ಈ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಗಿದ್ದು, ಭಾವಪೂರ್ಣ ಪದಪುಂಜಗಳ ಮೂಲಕ ಬದುಕು-ಬವಣೆ, ನೋವು-ನಲಿವುಗಳ ವಾಸ್ತವ ಚಿತ್ರಣವನ್ನು ತೆರೆದಿಡುವ ಈ ಕೃತಿಯು ಸಾಹಿತ್ಯ ಪ್ರಿಯರ ಮೆಚ್ಚುಗೆ ಗಳಿಸಿತ್ತು.

ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಅರ್ಹತೆ ಗಳಿಸಿದ ತನ್ನ ಚೊಚ್ಚಲ ಕವನ ಸಂಕಲನದ ಕುರಿತಾಗಿ ಹೆಮ್ಮೆ ಪಡುತ್ತಿರುವ ಕವಯತ್ರಿ, ತನ್ನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡಿದ ಗುರುಗಳು, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಭಿಮಾನದಿಂದ ಸ್ಮರಿಸಿಕೊಳ್ಳುತ್ತಿದ್ದಾರೆ.

ಜುಲೈ 7 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಈ ಪುರಸ್ಕಾರ ಪಡೆಯಲಿರುವ ಪ್ರಮೀಳಾರಾಜ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಜ್ ಅವರ ಧರ್ಮಪತ್ನಿ ಹಾಗೂ ಬಂಟ್ವಾಳದ ಆಲದಪದವು ದಿ‌. ಶೀನ ಮತ್ತು  ಲಲಿತ ದಂಪತಿಗಳ ಸುಪುತ್ರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

8 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

11 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

20 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

22 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

23 hours ago