ಸುಳ್ಯ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.) ಬೆಳಗಾವಿ, ಇದರ ವತಿಯಿಂದ ಕೊಡಮಾಡುವ ಈ ಬಾರಿಯ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಗೌರವ ಪುರಸ್ಕಾರಕ್ಕೆ ನಿಡುಬೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾರಾಜ್ ಆಯ್ಕೆಯಾಗಿರುತ್ತಾರೆ.
ಸಾಹಿತ್ಯ ಕ್ಷೇತ್ರದ ಹದಿನೈದು ಮಂದಿ ಸಾಧಕರ ಪ್ರಕಟಗೊಂಡ ಕೃತಿಗಳನ್ನು ಆರಿಸಿ ಈ ಗೌರವ ಪುರಸ್ಕಾರ ನೀಡಲಾಗುತ್ತಿದ್ದು, ಕವಯತ್ರಿ ಪ್ರಮಿಳಾರಾಜ್ ಅವರ ‘ಸಂಗೀತಾ – ನನ್ನೆದೆಯ ಭಾವಗಳ ಯಾನ’ ಕವನ ಸಂಕಲನವು ಈ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ. ಕಳೆದ ವರ್ಷ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ನಡೆಸಲಾದ ಶಿಕ್ಷಕರ ಕವಿಗೋಷ್ಠಿಯ ದಿನ ಈ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಗಿದ್ದು, ಭಾವಪೂರ್ಣ ಪದಪುಂಜಗಳ ಮೂಲಕ ಬದುಕು-ಬವಣೆ, ನೋವು-ನಲಿವುಗಳ ವಾಸ್ತವ ಚಿತ್ರಣವನ್ನು ತೆರೆದಿಡುವ ಈ ಕೃತಿಯು ಸಾಹಿತ್ಯ ಪ್ರಿಯರ ಮೆಚ್ಚುಗೆ ಗಳಿಸಿತ್ತು.
ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಅರ್ಹತೆ ಗಳಿಸಿದ ತನ್ನ ಚೊಚ್ಚಲ ಕವನ ಸಂಕಲನದ ಕುರಿತಾಗಿ ಹೆಮ್ಮೆ ಪಡುತ್ತಿರುವ ಕವಯತ್ರಿ, ತನ್ನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡಿದ ಗುರುಗಳು, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಭಿಮಾನದಿಂದ ಸ್ಮರಿಸಿಕೊಳ್ಳುತ್ತಿದ್ದಾರೆ.
ಜುಲೈ 7 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಈ ಪುರಸ್ಕಾರ ಪಡೆಯಲಿರುವ ಪ್ರಮೀಳಾರಾಜ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಜ್ ಅವರ ಧರ್ಮಪತ್ನಿ ಹಾಗೂ ಬಂಟ್ವಾಳದ ಆಲದಪದವು ದಿ. ಶೀನ ಮತ್ತು ಲಲಿತ ದಂಪತಿಗಳ ಸುಪುತ್ರಿ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…