Advertisement
ಸಾಹಿತ್ಯ

ಶಿಕ್ಷಕಿ‌ ಪ್ರಮೀಳಾರಾಜ್‌ ಗೆ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಪ್ರಶಸ್ತಿ

Share

ಸುಳ್ಯ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ.) ಬೆಳಗಾವಿ, ಇದರ ವತಿಯಿಂದ ಕೊಡಮಾಡುವ ಈ ಬಾರಿಯ ರಾಷ್ಟ್ರಮಟ್ಟದ ‘ಸಾಹಿತ್ಯ ವಿಭೂಷಣ’ ಗೌರವ ಪುರಸ್ಕಾರಕ್ಕೆ ನಿಡುಬೆ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಪ್ರಮೀಳಾರಾಜ್ ಆಯ್ಕೆಯಾಗಿರುತ್ತಾರೆ.

ಸಾಹಿತ್ಯ ‌ಕ್ಷೇತ್ರದ ಹದಿನೈದು ಮಂದಿ ಸಾಧಕರ ಪ್ರಕಟಗೊಂಡ ಕೃತಿಗಳನ್ನು ಆರಿಸಿ ಈ ಗೌರವ ಪುರಸ್ಕಾರ ನೀಡಲಾಗುತ್ತಿದ್ದು, ಕವಯತ್ರಿ ಪ್ರಮಿಳಾರಾಜ್ ಅವರ ‘ಸಂಗೀತಾ – ನನ್ನೆದೆಯ ಭಾವಗಳ ಯಾನ’ ಕವನ ಸಂಕಲನವು ಈ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತದೆ. ಕಳೆದ ವರ್ಷ ಸುವಿಚಾರ ಸಾಹಿತ್ಯ ವೇದಿಕೆ ವತಿಯಿಂದ ನಡೆಸಲಾದ ಶಿಕ್ಷಕರ ಕವಿಗೋಷ್ಠಿಯ ದಿನ ಈ ಕವನ ಸಂಕಲನವನ್ನು ಬಿಡುಗಡೆಗೊಳಿಸಲಾಗಿದ್ದು, ಭಾವಪೂರ್ಣ ಪದಪುಂಜಗಳ ಮೂಲಕ ಬದುಕು-ಬವಣೆ, ನೋವು-ನಲಿವುಗಳ ವಾಸ್ತವ ಚಿತ್ರಣವನ್ನು ತೆರೆದಿಡುವ ಈ ಕೃತಿಯು ಸಾಹಿತ್ಯ ಪ್ರಿಯರ ಮೆಚ್ಚುಗೆ ಗಳಿಸಿತ್ತು.

Advertisement

ರಾಷ್ಟ್ರಮಟ್ಟದ ಪುರಸ್ಕಾರಕ್ಕೆ ಅರ್ಹತೆ ಗಳಿಸಿದ ತನ್ನ ಚೊಚ್ಚಲ ಕವನ ಸಂಕಲನದ ಕುರಿತಾಗಿ ಹೆಮ್ಮೆ ಪಡುತ್ತಿರುವ ಕವಯತ್ರಿ, ತನ್ನ ಸಾಹಿತ್ಯ ಕೃಷಿಗೆ ಪ್ರೋತ್ಸಾಹ ನೀಡಿದ ಗುರುಗಳು, ಸ್ನೇಹಿತರು ಹಾಗೂ ಹಿತೈಷಿಗಳನ್ನು ಅಭಿಮಾನದಿಂದ ಸ್ಮರಿಸಿಕೊಳ್ಳುತ್ತಿದ್ದಾರೆ.

ಜುಲೈ 7 ರಂದು ಬೆಳಗಾವಿಯಲ್ಲಿ ನಡೆಯಲಿರುವ ರಾಷ್ಟ ಮಟ್ಟದ ಗ್ರಾಮೀಣ ಸಾಹಿತ್ಯ ಸಮ್ಮೇಳನದಲ್ಲಿ ಈ ಪುರಸ್ಕಾರ ಪಡೆಯಲಿರುವ ಪ್ರಮೀಳಾರಾಜ್ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ರಾಜ್ ಅವರ ಧರ್ಮಪತ್ನಿ ಹಾಗೂ ಬಂಟ್ವಾಳದ ಆಲದಪದವು ದಿ‌. ಶೀನ ಮತ್ತು  ಲಲಿತ ದಂಪತಿಗಳ ಸುಪುತ್ರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

14 minutes ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

3 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

4 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

11 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

13 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

13 hours ago