Advertisement
ಅನುಕ್ರಮ

ಶಿಕ್ಷಕ-ವಿದ್ಯಾರ್ಥಿ ಸಂಬಂಧ ಗಟ್ಟಿಯಾಗಲಿ

Share

ಅಂದು ಶಿಕ್ಷಕರ ದಿನಾಚರಣೆ. ನಾನು ನನ್ನ ಪುತ್ರನೊಂದಿಗೆ ಅವನು ಕಲಿತ ಪುತ್ತೂರಿನ ಅಂಬಿಕಾ ವಿದ್ಯಾಲಯದ ಸುಬ್ರಹ್ಮಣ್ಯ ನಟ್ಟೋಜರನ್ನು ಭೇಟಿ ಆಗುವ ಉದ್ದೇಶದಿಂದ ಅಂಬಿಕಾ ವಿದ್ಯಾಲಯಕ್ಕೆ ಹೋಗಿದ್ದೆವು.

ಅಲ್ಲಿ ಶಿಕ್ಷಕರ ಮತ್ತು ಮಕ್ಕಳ ಅದ್ಭುತವಾದ ,ಸಂಸ್ಕಾರಯುತ ಲೋಕ ನಮ್ಮ ಮುಂದೆ ತೆರೆದುಕೊಂಡಿತ್ತು.ಶಿಕ್ಷಕರ ದಿನಾಚರಣೆ ಆಚರಿಸಿಕೊಳ್ಳುತ್ತಿದ್ದ ಮಕ್ಕಳೊಂದಿಗೆ ನಾವೂ ಸಭಾಂಗಣದಲ್ಲಿ ಹೋಗಿ ಕುಳಿತೆವು.ಮಕ್ಕಳು ಶಿಕ್ಷಕರನ್ನು ಪಕ್ಕದಲ್ಲಿ ಕೂರಿಸಿ ತಮ್ಮದೇ ಕಲ್ಪನೆಯ ಶಿಕ್ಷಕರ ದಿನಾಚರಣೆಯನ್ನು ಆಚರಿಸುತ್ತಿದ್ದರು. ಪುಟ್ಟ ಮಕ್ಕಳು ಗುರು ಹಿರಿಯರ ಚರಣಗಳಿಗೆ ಶಿರಬಾಗಿ ನಮಿಸಿ ಆಶೀರ್ವಾದ ಪಡಕೊಳ್ಳುವ ದೃಶ್ಯ ಕಂಡು ನಿಬ್ಬೆರಗಾದೆವು. ಕೆಲವು ಮಕ್ಕಳಂತೂ ನಮ್ಮೆಡೆಗೂ ಬಂದು ಹೂವನ್ನಿತ್ತು ಶಿರಬಾಗಿ ನಮಿಸಿ ಪ್ರೀತಿಯ ನುಡಿಗಳನ್ನಾಡಿದ್ದು ನಮ್ಮನ್ನು ಮಂತ್ರ ಮುಗ್ಧರನ್ನಾಗಿಸಿದ್ದೂ ನಿಜ.

ಈವತ್ತಿನ ತಳಕು ಬಳುಕಿನ ಸ್ವೇಚ್ಚಾ ಸಮಾಜದಲ್ಲಿ ಪುಟ್ಟ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸಿದ,ಬೆಳೆಸುವ ಪರಿ ನಿಜಕ್ಕೂ ಪ್ರಶಂಸನೀಯ. ಭಾರತೀಯತೆ,ಸನಾತನತೆ ಅವಿನಾಶಿನಿ ಎಂಬುದ ಕಂಡು ಮನಸ್ಸು ಸಂತಸಗೊಂಡದ್ದೂ ಹೌದು.
ವಂದೇ ಗುರೂಣಾಂ ಚರಣಾರವಿಂದೇ
ಸಂಧರ್ಶಿತಸ್ವಾತ್ಮ ಸುಖಾವಬೋಧೇ
ಜನಸ್ಯಯೇ ಜಾಂಗಲಿಕಾಯಮಾನೇ
ಸಂಸಾರ ಹಾಲಹಲಮೋಹಶಾಂತ್ಯೈ…
ಎಂದು ಮಕ್ಕಳು ಶಿಕ್ಷಕ ಸಮಾಜವನ್ನು ಪೂಜಿಸಿದ ಆ ಕ್ಷಣಗಳಲ್ಲಿ ನಾವೂ ಅಲ್ಲಿದ್ದುದು ನಿಜಕ್ಕೂ ಅವಿಸ್ಮರಣೀಯ. ಇಂಥಹ ಧನ್ಯ ಶಿಕ್ಷಕ ವಿದ್ಯಾರ್ಥಿ ಸಮೂಹ ದೇಶದೆಲ್ಲೆಡೆ ಬೆಳೆದು ಬರಲೆಂಬ ಆಶಯ ನಮ್ಮೆಲ್ಲರದಾಗಲಿ.

 

  • ಸುರೇಶ್ಚಂದ್ರ ಕಲ್ಮಡ್ಕ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago