Advertisement
ಅಂಕಣ

ಶಿಕ್ಷಕ-ವಿದ್ಯಾರ್ಥಿ ಸಂಬಂಧ ಗಟ್ಟಿಯಾಗಲಿ

Share

ಅಂದು ಶಿಕ್ಷಕರ ದಿನಾಚರಣೆ. ನಾನು ನನ್ನ ಪುತ್ರನೊಂದಿಗೆ ಅವನು ಕಲಿತ ಪುತ್ತೂರಿನ ಅಂಬಿಕಾ ವಿದ್ಯಾಲಯದ ಸುಬ್ರಹ್ಮಣ್ಯ ನಟ್ಟೋಜರನ್ನು ಭೇಟಿ ಆಗುವ ಉದ್ದೇಶದಿಂದ ಅಂಬಿಕಾ ವಿದ್ಯಾಲಯಕ್ಕೆ ಹೋಗಿದ್ದೆವು.

Advertisement
Advertisement

ಅಲ್ಲಿ ಶಿಕ್ಷಕರ ಮತ್ತು ಮಕ್ಕಳ ಅದ್ಭುತವಾದ ,ಸಂಸ್ಕಾರಯುತ ಲೋಕ ನಮ್ಮ ಮುಂದೆ ತೆರೆದುಕೊಂಡಿತ್ತು.ಶಿಕ್ಷಕರ ದಿನಾಚರಣೆ ಆಚರಿಸಿಕೊಳ್ಳುತ್ತಿದ್ದ ಮಕ್ಕಳೊಂದಿಗೆ ನಾವೂ ಸಭಾಂಗಣದಲ್ಲಿ ಹೋಗಿ ಕುಳಿತೆವು.ಮಕ್ಕಳು ಶಿಕ್ಷಕರನ್ನು ಪಕ್ಕದಲ್ಲಿ ಕೂರಿಸಿ ತಮ್ಮದೇ ಕಲ್ಪನೆಯ ಶಿಕ್ಷಕರ ದಿನಾಚರಣೆಯನ್ನು ಆಚರಿಸುತ್ತಿದ್ದರು. ಪುಟ್ಟ ಮಕ್ಕಳು ಗುರು ಹಿರಿಯರ ಚರಣಗಳಿಗೆ ಶಿರಬಾಗಿ ನಮಿಸಿ ಆಶೀರ್ವಾದ ಪಡಕೊಳ್ಳುವ ದೃಶ್ಯ ಕಂಡು ನಿಬ್ಬೆರಗಾದೆವು. ಕೆಲವು ಮಕ್ಕಳಂತೂ ನಮ್ಮೆಡೆಗೂ ಬಂದು ಹೂವನ್ನಿತ್ತು ಶಿರಬಾಗಿ ನಮಿಸಿ ಪ್ರೀತಿಯ ನುಡಿಗಳನ್ನಾಡಿದ್ದು ನಮ್ಮನ್ನು ಮಂತ್ರ ಮುಗ್ಧರನ್ನಾಗಿಸಿದ್ದೂ ನಿಜ.

Advertisement

ಈವತ್ತಿನ ತಳಕು ಬಳುಕಿನ ಸ್ವೇಚ್ಚಾ ಸಮಾಜದಲ್ಲಿ ಪುಟ್ಟ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸಿದ,ಬೆಳೆಸುವ ಪರಿ ನಿಜಕ್ಕೂ ಪ್ರಶಂಸನೀಯ. ಭಾರತೀಯತೆ,ಸನಾತನತೆ ಅವಿನಾಶಿನಿ ಎಂಬುದ ಕಂಡು ಮನಸ್ಸು ಸಂತಸಗೊಂಡದ್ದೂ ಹೌದು.
ವಂದೇ ಗುರೂಣಾಂ ಚರಣಾರವಿಂದೇ
ಸಂಧರ್ಶಿತಸ್ವಾತ್ಮ ಸುಖಾವಬೋಧೇ
ಜನಸ್ಯಯೇ ಜಾಂಗಲಿಕಾಯಮಾನೇ
ಸಂಸಾರ ಹಾಲಹಲಮೋಹಶಾಂತ್ಯೈ…
ಎಂದು ಮಕ್ಕಳು ಶಿಕ್ಷಕ ಸಮಾಜವನ್ನು ಪೂಜಿಸಿದ ಆ ಕ್ಷಣಗಳಲ್ಲಿ ನಾವೂ ಅಲ್ಲಿದ್ದುದು ನಿಜಕ್ಕೂ ಅವಿಸ್ಮರಣೀಯ. ಇಂಥಹ ಧನ್ಯ ಶಿಕ್ಷಕ ವಿದ್ಯಾರ್ಥಿ ಸಮೂಹ ದೇಶದೆಲ್ಲೆಡೆ ಬೆಳೆದು ಬರಲೆಂಬ ಆಶಯ ನಮ್ಮೆಲ್ಲರದಾಗಲಿ.

 

Advertisement
  • ಸುರೇಶ್ಚಂದ್ರ ಕಲ್ಮಡ್ಕ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬಾಳೆದಿಂಡಿನ ರಸ ಕಿಡ್ನಿಯಲ್ಲಿರುವ ಕಲ್ಲನ್ನು ಕರಗಿಸಬಲ್ಲುದು..!

ಬಾಳೆದಿಂಡು ಉತ್ತಮ ಔಷಧವಾಗಿದೆ. ಬಾಳೆ ರಸದ ವಿವಿಧ ಔಷಧೀಯ ಗುಣಗಳ ಬಗ್ಗೆ ಕುಮಾರ್‌…

13 hours ago

ಆರೋಗ್ಯ ಕವಚ ಸಿಬಂದಿಗಳಿಗೆ ವೇತನವಾಗಿಲ್ಲ..! | ಗ್ರಾಮೀಣ ಭಾಗದ ಜೀವ ರಕ್ಷಕರು ಅತಂತ್ರದಲ್ಲಿ..!

ಆರೋಗ್ಯ ಕವಚ ಸಿಬ್ಬಂದಿಗಳಿಗೆ ಕಳೆದ ಹಲವು ತಿಂಗಳುಗಳಿಂದ ವೇತನವಾಗಿಲ್ಲ.

15 hours ago

ಮಲೆನಾಡ ಗಿಡ್ಡ ತಳಿಯ ಗೋರಕ್ಷಣೆ ಅನಿವಾರ್ಯತೆ ಏಕೆ..? | ಅವುಗಳ ಮಹತ್ವ ಏನು ? ಜೀವಾಮೃತದಿಂದ ಅಡಿಕೆ ತೋಟ ಏನಾಯ್ತ..?

ದೇಸೀ ಗೋವು ಉಳಿಯಬೇಕು ಏಕೆ ಎಂಬುದಕ್ಕೆ ಹಲವು ನಿದರ್ಶನ, ಉದಾಹರಣೆ ಇದೆ. ಈ…

19 hours ago

Karnataka Weather | 30-04-2024 | ರಾಜ್ಯದಲ್ಲಿ ಮೋಡದ ವಾತಾವರಣ | ಕೆಲವು ಕಡೆ ತುಂತುರು ಮಳೆ ಸಾಧ್ಯತೆ |

ಈಗಿನಂತೆ ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಗುಡುಗು, ಗಾಳಿ ಸಹಿತ ಉತ್ತಮ…

23 hours ago

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ.…

23 hours ago