Advertisement
ಅನುಕ್ರಮ

ಶಿಕ್ಷಕ-ವಿದ್ಯಾರ್ಥಿ ಸಂಬಂಧ ಗಟ್ಟಿಯಾಗಲಿ

Share

ಅಂದು ಶಿಕ್ಷಕರ ದಿನಾಚರಣೆ. ನಾನು ನನ್ನ ಪುತ್ರನೊಂದಿಗೆ ಅವನು ಕಲಿತ ಪುತ್ತೂರಿನ ಅಂಬಿಕಾ ವಿದ್ಯಾಲಯದ ಸುಬ್ರಹ್ಮಣ್ಯ ನಟ್ಟೋಜರನ್ನು ಭೇಟಿ ಆಗುವ ಉದ್ದೇಶದಿಂದ ಅಂಬಿಕಾ ವಿದ್ಯಾಲಯಕ್ಕೆ ಹೋಗಿದ್ದೆವು.

ಅಲ್ಲಿ ಶಿಕ್ಷಕರ ಮತ್ತು ಮಕ್ಕಳ ಅದ್ಭುತವಾದ ,ಸಂಸ್ಕಾರಯುತ ಲೋಕ ನಮ್ಮ ಮುಂದೆ ತೆರೆದುಕೊಂಡಿತ್ತು.ಶಿಕ್ಷಕರ ದಿನಾಚರಣೆ ಆಚರಿಸಿಕೊಳ್ಳುತ್ತಿದ್ದ ಮಕ್ಕಳೊಂದಿಗೆ ನಾವೂ ಸಭಾಂಗಣದಲ್ಲಿ ಹೋಗಿ ಕುಳಿತೆವು.ಮಕ್ಕಳು ಶಿಕ್ಷಕರನ್ನು ಪಕ್ಕದಲ್ಲಿ ಕೂರಿಸಿ ತಮ್ಮದೇ ಕಲ್ಪನೆಯ ಶಿಕ್ಷಕರ ದಿನಾಚರಣೆಯನ್ನು ಆಚರಿಸುತ್ತಿದ್ದರು. ಪುಟ್ಟ ಮಕ್ಕಳು ಗುರು ಹಿರಿಯರ ಚರಣಗಳಿಗೆ ಶಿರಬಾಗಿ ನಮಿಸಿ ಆಶೀರ್ವಾದ ಪಡಕೊಳ್ಳುವ ದೃಶ್ಯ ಕಂಡು ನಿಬ್ಬೆರಗಾದೆವು. ಕೆಲವು ಮಕ್ಕಳಂತೂ ನಮ್ಮೆಡೆಗೂ ಬಂದು ಹೂವನ್ನಿತ್ತು ಶಿರಬಾಗಿ ನಮಿಸಿ ಪ್ರೀತಿಯ ನುಡಿಗಳನ್ನಾಡಿದ್ದು ನಮ್ಮನ್ನು ಮಂತ್ರ ಮುಗ್ಧರನ್ನಾಗಿಸಿದ್ದೂ ನಿಜ.

ಈವತ್ತಿನ ತಳಕು ಬಳುಕಿನ ಸ್ವೇಚ್ಚಾ ಸಮಾಜದಲ್ಲಿ ಪುಟ್ಟ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸಿದ,ಬೆಳೆಸುವ ಪರಿ ನಿಜಕ್ಕೂ ಪ್ರಶಂಸನೀಯ. ಭಾರತೀಯತೆ,ಸನಾತನತೆ ಅವಿನಾಶಿನಿ ಎಂಬುದ ಕಂಡು ಮನಸ್ಸು ಸಂತಸಗೊಂಡದ್ದೂ ಹೌದು.
ವಂದೇ ಗುರೂಣಾಂ ಚರಣಾರವಿಂದೇ
ಸಂಧರ್ಶಿತಸ್ವಾತ್ಮ ಸುಖಾವಬೋಧೇ
ಜನಸ್ಯಯೇ ಜಾಂಗಲಿಕಾಯಮಾನೇ
ಸಂಸಾರ ಹಾಲಹಲಮೋಹಶಾಂತ್ಯೈ…
ಎಂದು ಮಕ್ಕಳು ಶಿಕ್ಷಕ ಸಮಾಜವನ್ನು ಪೂಜಿಸಿದ ಆ ಕ್ಷಣಗಳಲ್ಲಿ ನಾವೂ ಅಲ್ಲಿದ್ದುದು ನಿಜಕ್ಕೂ ಅವಿಸ್ಮರಣೀಯ. ಇಂಥಹ ಧನ್ಯ ಶಿಕ್ಷಕ ವಿದ್ಯಾರ್ಥಿ ಸಮೂಹ ದೇಶದೆಲ್ಲೆಡೆ ಬೆಳೆದು ಬರಲೆಂಬ ಆಶಯ ನಮ್ಮೆಲ್ಲರದಾಗಲಿ.

 

  • ಸುರೇಶ್ಚಂದ್ರ ಕಲ್ಮಡ್ಕ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago