Advertisement
ಅನುಕ್ರಮ

ಶಿಕ್ಷಕ-ವಿದ್ಯಾರ್ಥಿ ಸಂಬಂಧ ಗಟ್ಟಿಯಾಗಲಿ

Share

ಅಂದು ಶಿಕ್ಷಕರ ದಿನಾಚರಣೆ. ನಾನು ನನ್ನ ಪುತ್ರನೊಂದಿಗೆ ಅವನು ಕಲಿತ ಪುತ್ತೂರಿನ ಅಂಬಿಕಾ ವಿದ್ಯಾಲಯದ ಸುಬ್ರಹ್ಮಣ್ಯ ನಟ್ಟೋಜರನ್ನು ಭೇಟಿ ಆಗುವ ಉದ್ದೇಶದಿಂದ ಅಂಬಿಕಾ ವಿದ್ಯಾಲಯಕ್ಕೆ ಹೋಗಿದ್ದೆವು.

ಅಲ್ಲಿ ಶಿಕ್ಷಕರ ಮತ್ತು ಮಕ್ಕಳ ಅದ್ಭುತವಾದ ,ಸಂಸ್ಕಾರಯುತ ಲೋಕ ನಮ್ಮ ಮುಂದೆ ತೆರೆದುಕೊಂಡಿತ್ತು.ಶಿಕ್ಷಕರ ದಿನಾಚರಣೆ ಆಚರಿಸಿಕೊಳ್ಳುತ್ತಿದ್ದ ಮಕ್ಕಳೊಂದಿಗೆ ನಾವೂ ಸಭಾಂಗಣದಲ್ಲಿ ಹೋಗಿ ಕುಳಿತೆವು.ಮಕ್ಕಳು ಶಿಕ್ಷಕರನ್ನು ಪಕ್ಕದಲ್ಲಿ ಕೂರಿಸಿ ತಮ್ಮದೇ ಕಲ್ಪನೆಯ ಶಿಕ್ಷಕರ ದಿನಾಚರಣೆಯನ್ನು ಆಚರಿಸುತ್ತಿದ್ದರು. ಪುಟ್ಟ ಮಕ್ಕಳು ಗುರು ಹಿರಿಯರ ಚರಣಗಳಿಗೆ ಶಿರಬಾಗಿ ನಮಿಸಿ ಆಶೀರ್ವಾದ ಪಡಕೊಳ್ಳುವ ದೃಶ್ಯ ಕಂಡು ನಿಬ್ಬೆರಗಾದೆವು. ಕೆಲವು ಮಕ್ಕಳಂತೂ ನಮ್ಮೆಡೆಗೂ ಬಂದು ಹೂವನ್ನಿತ್ತು ಶಿರಬಾಗಿ ನಮಿಸಿ ಪ್ರೀತಿಯ ನುಡಿಗಳನ್ನಾಡಿದ್ದು ನಮ್ಮನ್ನು ಮಂತ್ರ ಮುಗ್ಧರನ್ನಾಗಿಸಿದ್ದೂ ನಿಜ.

ಈವತ್ತಿನ ತಳಕು ಬಳುಕಿನ ಸ್ವೇಚ್ಚಾ ಸಮಾಜದಲ್ಲಿ ಪುಟ್ಟ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಬೆಳೆಸಿದ,ಬೆಳೆಸುವ ಪರಿ ನಿಜಕ್ಕೂ ಪ್ರಶಂಸನೀಯ. ಭಾರತೀಯತೆ,ಸನಾತನತೆ ಅವಿನಾಶಿನಿ ಎಂಬುದ ಕಂಡು ಮನಸ್ಸು ಸಂತಸಗೊಂಡದ್ದೂ ಹೌದು.
ವಂದೇ ಗುರೂಣಾಂ ಚರಣಾರವಿಂದೇ
ಸಂಧರ್ಶಿತಸ್ವಾತ್ಮ ಸುಖಾವಬೋಧೇ
ಜನಸ್ಯಯೇ ಜಾಂಗಲಿಕಾಯಮಾನೇ
ಸಂಸಾರ ಹಾಲಹಲಮೋಹಶಾಂತ್ಯೈ…
ಎಂದು ಮಕ್ಕಳು ಶಿಕ್ಷಕ ಸಮಾಜವನ್ನು ಪೂಜಿಸಿದ ಆ ಕ್ಷಣಗಳಲ್ಲಿ ನಾವೂ ಅಲ್ಲಿದ್ದುದು ನಿಜಕ್ಕೂ ಅವಿಸ್ಮರಣೀಯ. ಇಂಥಹ ಧನ್ಯ ಶಿಕ್ಷಕ ವಿದ್ಯಾರ್ಥಿ ಸಮೂಹ ದೇಶದೆಲ್ಲೆಡೆ ಬೆಳೆದು ಬರಲೆಂಬ ಆಶಯ ನಮ್ಮೆಲ್ಲರದಾಗಲಿ.

 

  • ಸುರೇಶ್ಚಂದ್ರ ಕಲ್ಮಡ್ಕ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

15 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

21 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago