Advertisement
MIRROR FOCUS

ಶಿಕ್ಷಣಕ್ಕೆ ಕೂಡಿಟ್ಟ ಹಣ ಬಡವರಿಗೆ ನೀಡಿದ ಸೆಲೂನ್ ಮಾಲಕರ ಪುತ್ರಿಗೆ ಜಾಗತಿಕ ಮನ್ನಣೆ | ಈಗ “ಬಡವರ ಸದ್ಭಾವನಾ ರಾಯಭಾರಿ”ಯಾಗಿ ನೇಮಕ |

Share

ಲಾಕ್ಡೌನ್ ನಡುವೆ ಧೈರ್ಯ ತುಂಬುವ, ಭರವಸೆ ನೀಡುವ ಸಂಗತಿ ಇದು. ದೇಶದಲ್ಲಿ ಇಂತಹ ನೂರಾರು ಸಂಗತಿಗಳು ನಡೆದಿದೆ. ಇದುವರೆಗೂ ಕೊರೊನಾ ವೈರಸ್ ಭಯವೇ ತುಂಬಿತೇ ಹೊರತು ಜಾಗೃತಿ ಇನ್ನೂ ಸರಿಯಾಗಿ ಮೂಡಿಲ್ಲ. ಈ ನಡುವೆಯೇ ಅನೇಕ ಧೈರ್ಯ ತುಂಬುವ ಸಂಗತಿಗಳು ನಡೆದು ಹೋದವು. ಅದಕ್ಕೀಗ ಮನ್ನಣೆ ಸಿಕ್ಕಿದೆ……

Advertisement
Advertisement

ಮಧುರೈ: ಶಿಕ್ಷಣಕ್ಕಾಗಿ ತಂದೆ ಕೂಡಿಟ್ಟಿದ್ದ 5 ಲಕ್ಷ ರೂಪಾಯಿ ಹಣವನ್ನು  ಲಾಕ್ಡೌನ್ ಸಮಯದಲ್ಲಿ  ಬಡವರಿಗೆ ನೀಡುವಂತೆ ತಂದೆಗೆ ಸೂಚಿಸಿ ಅನುಷ್ಠಾನ ಮಾಡಿದ ತಮಿಳುನಾಡಿನ ಮಧುರೈ ನಿವಾಸಿ ಸೆಲೂನ್ ಮಾಲಕ  ಮೋಹನ್ ಅವರ ಪುತ್ರಿ 13 ವರ್ಷದ ನೇತ್ರಾ ಎಂಬಾಕೆಯನ್ನು ವಿಶ್ವಸಂಸ್ಥೆಯ ಅಭಿವೃದ್ಧಿ ಮತ್ತು ಶಾಂತಿ ಸಂಘಟನೆ (UNADAP) “ಬಡವರ ಸದ್ಭಾವನಾ ರಾಯಭಾರಿ“ಯಾಗಿ ನೇಮಕ ಮಾಡಲಾಗಿದೆ.

Advertisement

ತಮಿಳುನಾಡಿನ ಮಧುರೈಯಲ್ಲಿರುವ 13 ವರ್ಷದ ನೇತ್ರಾ, ಕೊರೊನಾ ವೈರಸ್ ಸಂದರ್ಭದಲ್ಲಿ ಬಡವರಿಗೆ 5 ಲಕ್ಷ ರೂಪಾಯಿಗಳನ್ನು ನೀಡುವಂತೆ ತನ್ನ ತಂದೆಗೆ ಮನವಿ ಮಾಡಿದ್ದಳು. ನೇತ್ರಾಳ ತಂದೆ ಸೆಲೂನ್ ನಡೆಸುತ್ತಿದ್ದು ಮಗಳ ವಿದ್ಯಾಭ್ಯಾಸಕ್ಕಾಗಿ ಹಣ ಸಂಗ್ರಹಿಸಿದ್ದರು. ಕೊರೊನಾ ಲಾಕ್ಡೌನ್ ಸಂದರ್ಭ ಬಡವರ ಸಂಕಷ್ಟ ನೋಡಿದ ನೇತ್ರಾ ನಾಗರಿಕ ಸೇವೆ ಮಾಡಲು ತನ್ನ ವಿದ್ಯಾಭ್ಯಾಸಕ್ಕಾಗಿ ಸಂಗ್ರಹಿಸಿದ್ದ ಹಣವನ್ನು  ನೀಡುವಂತೆ ತಂದೆಯಲ್ಲಿ  ಮನವಿ ಮಾಡಿದ್ದಳು. ಇದಕ್ಕೆ ಸ್ಪಂದಿಸಿದ ಮನೆಯವರು ಮಗಳ ಬೇಡಿಕೆಯನ್ನು  ಈಡೇರಿಸಲು ಮೋಹನ್ ಅವರು ತಮ್ಮ ಮಗಳ ಶಿಕ್ಷಣಕ್ಕಾಗಿ ಉಳಿಸಿದ ಹಣವನ್ನು ಬಳಸಿಕೊಂಡು ಲಾಕ್ಡೌನ್ ಮಧ್ಯೆ 600 ಕ್ಕೂ ಹೆಚ್ಚು ಕುಟುಂಬಗಳಿಗೆ ಅಗತ್ಯ  ವಸ್ತುಗಳನ್ನು ಒದಗಿಸಿದರು. ಇದರ ಫಲವಾಗಿ ಇದೀಗ ವಿಶ್ವಸಂಸ್ಥೆಯ ಅಭಿವೃದ್ಧಿ ಮತ್ತು ಶಾಂತಿ ಸಂಘಟನೆ (UNADAP) “ಬಡವರ ಸದ್ಭಾವನಾ ರಾಯಭಾರಿ“ಯಾಗಿ ನೇತ್ರಾಳನ್ನು  ನೇಮಕ ಮಾಡಿದೆ.

ನ್ಯೂಯಾರ್ಕ್‌ನಲ್ಲಿ ನಡೆಯುವ ವಿಶ್ವಸಂಸ್ಥೆಯ (ಯುಎನ್) ಸಮಾವೇಶಗಳಲ್ಲಿ ಮತ್ತು ಜಿನೀವಾದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ   ಮಾತನಾಡಲು ನೇತ್ರಾಗೆ ಅವಕಾಶ ನೀಡಲಾಗುವುದು ಎಂದು ಯುಎನ್‌ಎಡಿಎಪಿ ಘೋಷಣೆ ಮಾಡಿದೆ.  ಇದೇ ಸಂದರ್ಭ ವಿಶ್ವ ನಾಯಕರು, ಶಿಕ್ಷಣ ತಜ್ಞರು, ರಾಜಕಾರಣಿಗಳು ಮತ್ತು ನಾಗರಿಕರೊಂದಿಗೆ ಸಂಪರ್ಕ ಸಾಧಿಸಲು ಮತ್ತು ಮಾತನಾಡಲು ಆಕೆಗೆ ಅವಕಾಶ ಮತ್ತು ಜವಾಬ್ದಾರಿಯನ್ನು ನೀಡುತ್ತದೆ ಎಂದು ಸಂಸ್ಥೆ ಹೇಳಿದೆ, ಇನ್ನಷ್ಟು ಬಡವರನ್ನು ತಲುಪಲು ಸಹಕಾರ ಮಾಡಲಾಗುತ್ತದೆ ಎಂದೂ ಹೇಳಿದೆ.

Advertisement

ಕೊರೊನಾ ಲಾಕ್ಡೌನ್ ಸಂದರ್ಭ ಎರಡು ತಿಂಗಳುಗಳ ಕಾಲ ಸೆಲೂನ್ ಮುಚ್ಚಲಾಗಿತ್ತು, ಯಾವುದೇ ಆದಾಯ ಇರಲಿಲ್ಲ. ಹೀಗಿದ್ದರೂ ಈ ನಿಸ್ವಾರ್ಥ ಸೇವೆ ಮಾಡಿರುವ ಇವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು “ಮನ್ ಕಿ ಬಾತ್”  ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿದ್ದರು.

ಇದೀಗ 13 ವರ್ಷದ ನೇತ್ರಾ ಸೇವೆಯ ಮೂಲಕ  ಗ್ರಾಮ ಮಟ್ಟದಿಂದ ದೇಶ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟಕ್ಕೆ ಏರಿದ್ದಾಳೆ.

Advertisement

 

 
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

2 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

8 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

9 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago