Advertisement
ಸುದ್ದಿಗಳು

ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಮಾನವಾಗಿ ಲಭ್ಯವಾಗಬೇಕು – ಡಾ.ಕೆ ಚಿನ್ನಪ್ಪ ಗೌಡ

Share

ಸುಳ್ಯ:ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಮಾನವಾಗಿ ಮತ್ತು ಅತ್ಯುತ್ತಮ ರೀತಿಯಲ್ಲಿ ಸಿಗಬೇಕು. ಶಿಕ್ಷಣ ಸಂಸ್ಥೆ ಯಾವ ಉದ್ದೇಶದಿಂದ ಬಂದಿದೆಯೋ ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹಾವೇರಿ ಜಾನಪದ ವಿಶ್ವ ವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಡಾ. ಕೆ ಚಿನ್ನಪ್ಪ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement
Advertisement

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಿದ್ಧವಿದ್ದುದನ್ನು ಬಳಸಿಕೊಳ್ಳುವುದಲ್ಲ, ಅವರನ್ನು ಸಿದ್ಧ ಪಡಿಸುವ ಕೆಲಸ ಶಿಕ್ಷಣ ಸಂಸ್ಥೆಗಳಿಂದಾಗಬೇಕು. ಅದಕ್ಕಾಗಿ ಅಲ್ಲಿರುವ ಅಧ್ಯಾಪಕರು ವಿದ್ಯಾರ್ಥಿಗಳು ಆಸಕ್ತಿಯಿಂದ, ಬದ್ಧತೆಯಿಂದ, ಲವಲವಿಕೆಯಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು, ಆಧುನಿಕತೆಗೆ ಸರಿಯಾಗಿ ಎಲ್ಲರೂ ತೆರೆದುಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ), ಸುಳ್ಯ ಇದರ ಅಧ್ಯಕ್ಷ ಡಾ. ಕೆ ವಿ ಚಿದಾನಂದರು ಮಾತನಾಡಿ, ಶಿಕ್ಷಣ ಸಂಸ್ಥೆಗಳ ಸ್ಥಾಪನೆಯೊಂದಿಗೆ ಊರಿನ ಅಭಿವೃದ್ಧಿ ಸಾಧ್ಯ ಎಂದು ಮನಗಂಡವರು ಕೆವಿಜಿಯವರು. ಆ ನಿಟ್ಟಿನಲ್ಲಿ ಇಂದು ಇಷ್ಟೆಲ್ಲಾ ವಿದ್ಯಾ ಸಂಸ್ಥೆಗಳು ಸುಳ್ಯದಲ್ಲಿ ತಲೆ ಎತ್ತಿವೆ. ವಿದ್ಯೆ ಎನ್ನುವುದಕ್ಕೆ ಕೊನೆಯೆಂಬುದಿಲ್ಲ, ಆದರೆ ಪಡೆದ ವಿದ್ಯೆಯನ್ನು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಭವಾನಿಶಂಕರ ಅಡ್ತಲೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಗಿರಿಧರ ಗೌಡ ಕೆ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಕೆ ಪೂವಪ್ಪ ಗೌಡ ವಿದ್ಯಾರ್ಥಿ ಪದಾಧಿಕಾರಿಗಳಿಗೆ, ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ  ಕೃಷ್ಣಪ್ರಸಾದ್ ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ತನ್ನ ಅನಿಸಿಕೆ ವ್ಯಕ್ತಪಡಿಸಿದರು.

ಸ್ಮಿತಾ ಎಂ, ಸಿಂಚನಾ, ಜೋತ್ಸ್ನಾ, ರಚನಾ, ರಕ್ಷಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪೂನಂ ಕಾರ್ಯಪ್ಪ ಶುಭ ಸಂದೇಶ ವಾಚಿಸಿ, ಜತೆ ಕಾರ್ಯದರ್ಶಿ ಲೋಹಿತ್ ಬಿ ಎ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಕೊಡಮಾಡಲ್ಪಟ್ಟ ಧನ ಸಹಾಯದ ಪಟ್ಟಿಯನ್ನು ಪ್ರಸ್ತುತಪಡಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಮಮತಾ ಕೆ ಅತಿಥಿಗಳನ್ನು ಪರಿಚಯಿಸಿ, ಕಾರ್ಯದರ್ಶಿ ಮೋನಿಷಾ ಕೆ ಎಂ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಪ್ರೇಮಿತಾ ಬಿ ಜೆ ಹಾಗೂ ದಿಯಾ ಮರಿಯಮ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

19 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago