Advertisement
ಸುದ್ದಿಗಳು

ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಮಾನವಾಗಿ ಲಭ್ಯವಾಗಬೇಕು – ಡಾ.ಕೆ ಚಿನ್ನಪ್ಪ ಗೌಡ

Share

ಸುಳ್ಯ:ಶಿಕ್ಷಣ ಮತ್ತು ಆರೋಗ್ಯ ಎಲ್ಲರಿಗೂ ಸಮಾನವಾಗಿ ಮತ್ತು ಅತ್ಯುತ್ತಮ ರೀತಿಯಲ್ಲಿ ಸಿಗಬೇಕು. ಶಿಕ್ಷಣ ಸಂಸ್ಥೆ ಯಾವ ಉದ್ದೇಶದಿಂದ ಬಂದಿದೆಯೋ ಅದಕ್ಕೆ ಪೂರಕವಾಗಿ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದು ಹಾವೇರಿ ಜಾನಪದ ವಿಶ್ವ ವಿದ್ಯಾಲಯದ ವಿಶ್ರಾಂತ ಉಪಕುಲಪತಿಗಳಾದ ಡಾ. ಕೆ ಚಿನ್ನಪ್ಪ ಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ 2019-20ನೇ ಸಾಲಿನ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸಿದ್ಧವಿದ್ದುದನ್ನು ಬಳಸಿಕೊಳ್ಳುವುದಲ್ಲ, ಅವರನ್ನು ಸಿದ್ಧ ಪಡಿಸುವ ಕೆಲಸ ಶಿಕ್ಷಣ ಸಂಸ್ಥೆಗಳಿಂದಾಗಬೇಕು. ಅದಕ್ಕಾಗಿ ಅಲ್ಲಿರುವ ಅಧ್ಯಾಪಕರು ವಿದ್ಯಾರ್ಥಿಗಳು ಆಸಕ್ತಿಯಿಂದ, ಬದ್ಧತೆಯಿಂದ, ಲವಲವಿಕೆಯಿಂದ ತಮ್ಮನ್ನು ತೊಡಗಿಸಿಕೊಳ್ಳಬೇಕು, ಆಧುನಿಕತೆಗೆ ಸರಿಯಾಗಿ ಎಲ್ಲರೂ ತೆರೆದುಕೊಳ್ಳಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ), ಸುಳ್ಯ ಇದರ ಅಧ್ಯಕ್ಷ ಡಾ. ಕೆ ವಿ ಚಿದಾನಂದರು ಮಾತನಾಡಿ, ಶಿಕ್ಷಣ ಸಂಸ್ಥೆಗಳ ಸ್ಥಾಪನೆಯೊಂದಿಗೆ ಊರಿನ ಅಭಿವೃದ್ಧಿ ಸಾಧ್ಯ ಎಂದು ಮನಗಂಡವರು ಕೆವಿಜಿಯವರು. ಆ ನಿಟ್ಟಿನಲ್ಲಿ ಇಂದು ಇಷ್ಟೆಲ್ಲಾ ವಿದ್ಯಾ ಸಂಸ್ಥೆಗಳು ಸುಳ್ಯದಲ್ಲಿ ತಲೆ ಎತ್ತಿವೆ. ವಿದ್ಯೆ ಎನ್ನುವುದಕ್ಕೆ ಕೊನೆಯೆಂಬುದಿಲ್ಲ, ಆದರೆ ಪಡೆದ ವಿದ್ಯೆಯನ್ನು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಭವಾನಿಶಂಕರ ಅಡ್ತಲೆ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಗಿರಿಧರ ಗೌಡ ಕೆ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಕೆ ಪೂವಪ್ಪ ಗೌಡ ವಿದ್ಯಾರ್ಥಿ ಪದಾಧಿಕಾರಿಗಳಿಗೆ, ಸದಸ್ಯರುಗಳಿಗೆ ಪ್ರಮಾಣ ವಚನ ಬೋಧಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ  ಕೃಷ್ಣಪ್ರಸಾದ್ ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ತನ್ನ ಅನಿಸಿಕೆ ವ್ಯಕ್ತಪಡಿಸಿದರು.

ಸ್ಮಿತಾ ಎಂ, ಸಿಂಚನಾ, ಜೋತ್ಸ್ನಾ, ರಚನಾ, ರಕ್ಷಾ ಪ್ರಾರ್ಥಿಸಿದ ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪೂನಂ ಕಾರ್ಯಪ್ಪ ಶುಭ ಸಂದೇಶ ವಾಚಿಸಿ, ಜತೆ ಕಾರ್ಯದರ್ಶಿ ಲೋಹಿತ್ ಬಿ ಎ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಕೊಡಮಾಡಲ್ಪಟ್ಟ ಧನ ಸಹಾಯದ ಪಟ್ಟಿಯನ್ನು ಪ್ರಸ್ತುತಪಡಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಮಮತಾ ಕೆ ಅತಿಥಿಗಳನ್ನು ಪರಿಚಯಿಸಿ, ಕಾರ್ಯದರ್ಶಿ ಮೋನಿಷಾ ಕೆ ಎಂ ವಂದನಾರ್ಪಣೆಗೈದರು. ವಿದ್ಯಾರ್ಥಿನಿಯರಾದ ಪ್ರೇಮಿತಾ ಬಿ ಜೆ ಹಾಗೂ ದಿಯಾ ಮರಿಯಮ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

3 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

12 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

12 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

13 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

23 hours ago